ಬೆಳಗಿನ ಜಾವ ಆತನ ಸೆಲ್ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕೈದಿ ಎಲ್ಲಿಯೂ ಪತ್ತೆಯಾಗಲಿಲ್ಲ. ಬೆಳಗ್ಗೆ 7 ಗಂಟೆಗೆ ಪರಾರಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಣ್ಣೂರು ಪಟ್ಟಣ ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಹುಡುಕಾಟ ನಡೆಯುತ್ತಿದೆ.
ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಶೋರ್ನೂರ್ ಬಳಿಯ ಮಂಜಕ್ಕಾಡ್ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. . ಅವನು ಹೇಗೆ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.