Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಧರಗಡ್ಡೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಬಳ್ಳಾರಿ, ಮೇ.08. ಶ್ರೀಧರಗಡ್ಡೆಯ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ, ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್(ರಿ)ಬಳ್ಳಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ "ಜಾನಪದ ಸಂಭ್ರಮ" ಎನ್ನುವ ಶೀರ್ಷಿಕೆ ಮಾಲಿಕೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿದ ಪರಮಪೂಜ್ಯ ಶ್ರೀಮರಿ ಕೊಟ್ಟೂರು ದೇಶಿಕರು, ನಿಯೋಜಿತ ಉತ್ತರಾಧಿಕಾರಿಗಳು ಶ್ರೀ ಜಗದ್ಗುರು ಕೊಟ್ಟೂರು ಸ್ವಾಮಿ ಸಂಸ್ಥಾನ ಮಠ ಶ್ರೀಧರಗಡ್ಡೆ ಇವರು ತಮ್ಮ ಅಶಿರ್ವಚನವನ್ನು ನೀಡುತ್ತಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತುಂಬಾ ಉತ್ತಮವಾದ ಕೆಲಸವನ್ನು ಮಾಡುತ್ತಿದೆ ಈ ತರಹದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹಮ್ಮಿಕೊಳ್ಳುತ್ತಿರುವುದು ತುಂಬಾ ಸ್ವಾಗತಾರ್ಹ, ಈಗಿನ ಜನರು ಪಾಶ್ಚಾತ್ಯ ಸಂಸ್ಕೃತಿಗೆ ಮಾರುವಾಗದೆ ನಮ್ಮ ಹಳ್ಳಿಗಾಡಿನ ಕಲೆಗಳಾದ ತೊಗಲುಗೊಂಬೆ, ಜನಪದ,ಬಯಲಾಟ ಈ ತರಹದ ಕಲೆಗಳನ್ನು ಮಕ್ಕಳಿಗೆ ಕಲಿಸಲು ಹೆಚ್ಚು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿ. ನಾಗರಾಜ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮಾತನಾಡುತ್ತಾ ಶ್ರೀಧರಗಡ್ಡೆಯು ಕಲೆಗಳ ತವರೂರು ಈ ಊರಿನಲ್ಲಿ ಪ್ರಸಿದ್ಧ ಕಲಾವಿದರು ಕಲಾ ಪೋಷಕರು ಇರುವುದು ತುಂಬಾ ಸಂತೋಷದ ಸಂಗತಿ ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಂದೀಶ್ ಮುಖಂಡರು ಶ್ರೀಧರ್ ಗಡ್ಡೆ. ನಮ್ಮ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರು ನಾವು ತನು,ಮನ,ಧನ ಗಳಿಂದ ಪ್ರೋತ್ಸಾಹಿಸುತ್ತೇವೆ ಎಂದು ತಮ್ಮ ಅಧ್ಯಕ್ಷತೆ ನುಡಿಗಳನ್ನು ಆಡಿದರು ವೇದಿಕೆಯ ಮೇಲೆ ದೊಡ್ಡಬಸಪ್ಪ ಯಾಟಿ ಗೌರಿ ಹಳ್ಳಿಮನೆ ಮಾಲೀಕರು ಬಳ್ಳಾರಿ, ಎಸ್.ಡಿ. ವೀರನಗೌಡ ಉದ್ಯಮಿಗಳು ಶ್ರೀಧರಗಡ್ಡೆ, ಎ ಜಂಬನಗೌಡ ಬಸವೇಶ್ವರ ಯುವಕ ಸಂಘ ಶ್ರೀಧರಗಡ್ಡೆ, ನಾಗೇಂದ್ರಪ್ಪ ಅಧ್ಯಕ್ಷರು ಬಸವೇಶ್ವರ ಟ್ರಸ್ಟ್ ಕಮಿಟಿ ಶ್ರೀಧರಗಡ್ಡೆ, ಪಿ. ನಿರಂಜನ್ ಮುಖಂಡರು ಶ್ರೀಧರಗಡ್ಡೆ, ಬಿ. ಬಸವರಾಜ್ ಉಪಾಧ್ಯಕ್ಷರು ಶ್ರೀ ಬಸವೇಶ್ವರ ಭಜನಾ ಮಂಡಳಿ ಶ್ರೀಧರ ಗಡ್ಡೆ, ಇನ್ನು ಮುಂತಾದವರು ಪಾಲ್ಗೊಂಡಿದ್ದರು. ವೇದಿಕೆಯ    ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಲಿಕೆಯಲ್ಲಿ ತೊಗಲಗೊಂಬೆ ಪ್ರದರ್ಶನ -ಶ್ರೀಮತಿ ಹುಲಿಗೆಮ್ಮ  ಮತ್ತು ತಂಡ ಬಳ್ಳಾರಿ, ಸುಗಮ ಸಂಗೀತ ಕು. ಸಹನಾ ಮತ್ತು ತಂಡ ಕಂಪ್ಲಿ, 
ಜಾನಪದ ನೃತ್ಯ ಕು. ಬಾನವತ ಮಾಯುಖ ಮತ್ತು ತಂಡ ಬಳ್ಳಾರಿ  ಹಾಗೂ ಕೀಬೋರ್ಡ್- ಶಿವಕುಮಾರ್ ಬಂಡಿಹಟ್ಟಿ  ತಬಲಾ-ಯೋಗೇಶ್ ಸಂಗನಕಲ್ಲು.ಈ ಕಾರ್ಯಕ್ರಮಗಳು ಸುಮಾರು ಮೂರು ತಾಸಿಗೂ ಹೆಚ್ಚು ನಡೆದವು  ಈ ಕಾರ್ಯಕ್ರಮದಲ್ಲಿ ಕಿಕ್ಕಿರಿದು ತುಂಬಿದ್ದ ಜನಸ್ತೋಮವು ಚಪ್ಪಾಳೆಗಳಿಂದ  ಕಲಾವಿದರನ್ನು ಹುರಿದುಂಬಿಸಿದರು. ಜಡೇಶ ಎಮ್ಮಿಗನೂರು ಕಾರ್ಯಕ್ರಮ ನಿರೂಪಣೆ ಮಾಡಿದರು. ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ ನ ಅಧ್ಯಕ್ಷರಾದ ಪ್ರಭುರವರು ಪ್ರಾಸ್ತವಿಕ ಮಾತನಾಡಿದರು.  ಟ್ರಸ್ಟ್ ಕಾರ್ಯದರ್ಶಿ ಶ್ರೀಮತಿ ಪಿ. ರೇಖಾ ರವರು ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ