Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ: ಕಲಾ ಪ್ರೇಕ್ಷಕರಿಗೆ ಭರಪೂರ ಮನರಂಜನೆ




ಬಳ್ಳಾರಿ,ಜೂ.17 :ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಪ್ರತಿ ತಿಂಗಳ ಮೂರನೇಯ ಶನಿವಾರದಂದು ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದೆ.


ಈ ತಿಂಗಳ ಶನಿವಾರ (ಜೂ.15 ರಂದು) ಏರ್ಪಡಿಸಿದ್ದ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸಿಗೆ ತುಸು ನೆಮ್ಮದಿ ದೊರೆಯುವ ತವಕದಿಂದ ಆಗಮಿಸಿದ್ದ ಕಲಾ ಪ್ರೇಕ್ಷಕರಿಗೆ, ಸಾರ್ವಜನಿಕರಿಗೆ ಭರಪೂರ ಮನರಂಜನೆ ನೀಡಿತು.


ಮುಸ್ಸಂಜೆ ಮೋಡ ಕವಿದು ಕತ್ತಲು ಆಗಮನ ಸಮಯದಲ್ಲಿ ಬಳ್ಳಾರಿ ಮೂಲದ ಜೀ ಕನ್ನಡ ವಾಹಿನಿಯ ಸರಿಗಮಪ -19 ರ ಸ್ಪರ್ಧಾಳು ಸೃಷ್ಟಿ ಸುರೇಶ್ ಅವರ ಸುಗಮ ಸಂಗೀತವು ಕೇಳುಗರು ಕಿವಿ ತಂಪಾಗಿಸಿತು. ಸಂಗೀತಕ್ಕೆ ಮನಸೋತು ಕಲಾ ಪ್ರೇಕ್ಷಕರು ಚಪ್ಪಾಳೆಗಳ ಸುರಿಮಳೆಗೈದರು.


ಸಿರುಗುಪ್ಪದ ಕೆ.ನರಸಿಂಹ ಮೂರ್ತಿ ಅವರ ಹಾಸ್ಯ ಚಟಾಕಿಗೆ ನೆರೆದಿದ್ದವರು ನಗೆಗಡಲಲ್ಲಿ ತೇಲಾಡಿದರು. ಬಳ್ಳಾರಿಯ ಸುಜಾತ ಕಲಾ ಟ್ರಸ್ಟ್ ಅವರ ಸಮೂಹ ನೃತ್ಯವು ನೋಡುಗರ ಕಣ್ಮನ ಸೆಳೆಯಿತು. ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ