LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದುಲ್ಕರ್ ಸಲ್ಮಾನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಮನೆಗಳ ಮೇಲೆ ಕಸ್ಟಮ್ಸ್ ಅಧಿಕಾರಿಗಳು ದಾಳಿ

ಮಲಯಾಳಂ ಚಿತ್ರರಂಗ ಮಾತ್ರವೇ ಅಲ್ಲದೆ ಪ್ಯಾನ್ ಇಂಡಿಯಾ ಸ್ಟಾರ್ ನಟ, ನಿರ್ಮಾಪಕರಾಗಿರುವ ದುಲ್ಕರ್ ಸಲ್ಮಾನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ಮನೆಗಳ ಮೇಲೆ ಕಸ್ಟಮ್ಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಇಬ್ಬರೂ ನಟರ ವಿರುದ್ಧ ಸ್ಮಗ್ಲಿಂಗ್ ಗುಮಾನಿಯಿಂದ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿರುವ ಕಾರುಗಳು, ಇತರೆ ವಿದೇಶಿ ವಸ್ತುಗಳ ತನಿಖೆ ನಡೆಸಿದ್ದಾರೆ.

ದುಲ್ಕರ್ ಸಲ್ಮಾನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಇಬ್ಬರೂ ಸಹ ಬಹಳ ಕಾರ್ ಕ್ರೇಜ್ ಹೊಂದಿರುವ ನಟರು. ತಮ್ಮ ಸಂಗ್ರಹದಲ್ಲಿ ಹಲವಾರು ಐಶಾರಾಮಿ ವಿದೇಶಿ ಬ್ರ್ಯಾಂಡ್​​ನ ಕಾರುಗಳನ್ನು ಹೊಂದಿದ್ದಾರೆ. ಕೆಲ ಲಿಮಿಟೆಡ್ ಎಡಿಷನ್ ಕಾರುಗಳನ್ನು ಈ ನಟರುಗಳು ವಿದೇಶಗಳಿಂದಲೂ ತರಿಸಿಕೊಂಡಿದ್ದಾರೆ. ಹಾಗಾಗಿ ಇದೀಗ ಕಸ್ಟಮ್ಸ್ ಅಧಿಕಾರಿಗಳು ಆ ಕಾರುಗಳ ದಾಖಲೆಗಳನ್ನು ಪರಿಶೀಲಿಸಿದ್ದು, ತೆರಿಗೆ, ನೊಂದಣಿ ಇತ್ಯಾದಿ ಮಾಹಿತಿಯನ್ನು ಪಡೆದಿದ್ದಾರೆ.

ಕೇರಳದ ಕೊಚ್ಚಿಯ ತೇವರದಲ್ಲಿರುವ ಪೃಥ್ವಿರಾಜ್ ಸುಕುಮಾರನ್ ಮನೆ ಹಾಗೂ ಕೊಚ್ಚಿಯ ಪನಂಪಿನ್ನಿ ನಗರದಲ್ಲಿರುವ ದುಲ್ಕರ್ ಸಲ್ಮಾನ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಪೃಥ್ವಿರಾಜ್ ಅವರ ತಿರುವನಂತಪುರಂನ ಮನೆ ಮೇಲೂ ದಾಳಿ ಮಾಡಿದ್ದಾರೆ. ಆದರೆ ಅಲ್ಲಿ ಯಾವುದೇ ವಿದೇಶಿ ವಾಹನ ಪತ್ತೆಯಾಗಿಲ್ಲವಂತೆ. ನಟರುಗಳು ಮಾತ್ರವೇ ಅಲ್ಲದೆ ಕೆಲವು ಉದ್ಯಮಿಗಳ ಮನೆಗಳ ಮೇಲೂ ಸಹ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗೆ ‘ನುಮ್​ಕೂರ್’ ಎಂದು ಹೆಸರಿಡಲಾಗಿದೆ. ವಾಹನಗಳನ್ನು ಮಲಯಾಳಿ ಭಾಷೆಯಲ್ಲಿ ನುಮ್​ಕೂರ್ ಎನ್ನಲಾಗುತ್ತದೆಯಂತೆ. ಅಕ್ರಮವಾಗಿ ವಿದೇಶಗಳಿಂದ ವಾಹನ ಆಮದು ಮಾಡಿಕೊಳ್ಳುವುದು, ತೆರಿಗೆ ವಂಚನೆಗಳನ್ನು ಪತ್ತೆ ಹಚ್ಚವುದು ದಾಳಿಯ ಉದ್ದೇಶ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್