ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.
ಒಡಿಶಾದಲ್ಲಿ ಭಾರಿ ಮಳೆ: ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಒಡಿಶಾದ ಸುಮಾರು 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಒಡಿಶಾ ಸರ್ಕಾರವು ಸುಮಾರು 800 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಭಾರತೀಯ ಕರಾವಳಿ ಕಾವಲು ಪಡೆ, ಎನ್ಡಿಆರ್ಎಫ್ ಮತ್ತು ಒಡಿಆರ್ಎಫ್ ತಂಡಗಳು ರಕ್ಷಣೆ, ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
300 ಕ್ಕೂ ಹೆಚ್ಚು ರೈಲುಗಳು ರದ್ದು: ದಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.