ದಲಿತ ನಾಯಕರ ಸಭೆಯಲ್ಲಿ ಚರ್ಚೆ ಆಗಿದ್ದೇನು?
ಎಲ್ಲಾ ಇಲಾಖೆಗಳಿಂದ ದಲಿತ ಸಮಾಜಕ್ಕೆ 42 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ವಾಸ್ತವದಲ್ಲಿ ಕೇವಲ 4 ಸಾವಿರ ಕೋಟಿ ರೂಪಾಯಿ ಮಾತ್ರ ಸಮಾಜಕ್ಕೆ ತಲುಪುತ್ತಿದೆ. ವಿವಿಧ ಇಲಾಖೆಗಳ ಫಲಾನುಭವಿ ಯೋಜನೆಗಳಿಗೆ ಸರಿಸುಮಾರು 2 ಲಕ್ಷಕ್ಕಿಂತ ಹೆಚ್ಚು ಅರ್ಜಿ ಸಲ್ಲಿಕೆ ಆಗುತ್ತದೆ. ಆದರೆ ಮೀಸಲಿಟ್ಟ ಹಣದಲ್ಲಿ ಶೇಕಡ 2ರಷ್ಟು ಮಾತ್ರ ಸಮುದಾಯಕ್ಕೆ ತಲುಪುತ್ತಿದೆ. ಈ ಪ್ರಮಾಣ ಕನಿಷ್ಠ ಶೇಕಡ 40 ರಷ್ಟಾದರೂ ಏರಿಕೆಯಾದರೆ ದಲಿತ ಸಮುದಾಯಕ್ಕೆ ಲಾಭಕರ ಎಂದು ಸಭೆಯಲ್ಲಿ ನಾಯಕರು ಚರ್ಚಿಸಿದ್ದಾರೆ.
ದಲಿತ ನಾಯಕರ ಸಭೆಯಲ್ಲಿ ಒಳ ಮೀಸಲಾತಿ ಚರ್ಚೆ
2011ರ ಜನಗಣತಿ ಆಧಾರದಲ್ಲಿ ಒಳ ಮೀಸಲಾತಿ ಘೋಷಣೆ ಬಗ್ಗೆ ಕೆಲವರ ಬೇಡಿಕೆ ಇದೆ. ಆದರೆ ಕಳೆದ 15 ವರ್ಷಗಳಲ್ಲಿ ಸಮುದಾಯದ ಸಂಖ್ಯೆ ಸಾಕಷ್ಟು ಏರಿಕೆ ಆಗಿದೆ. ಹೀಗಾಗಿ ಜನಗಣತಿಯ ಅಂಕಿಅಂಶ ಸದ್ಯಕ್ಕೆ ಯಾರ ಬಳಿಯೂ ಇಲ್ಲ. ಪ್ರಸ್ತುತ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಕಟಿಸಬೇಕು. ಹಾಗಾಗಿ ಸರ್ಕಾರ ವೈಜ್ಞಾನಿಕವಾಗಿ ಒಳ ಮೀಸಲಾತಿ ನೀಡುವ ಬಗ್ಗೆ ಚಿಂತಿಸಬೇಕು. ಇನ್ನೊಂದೆಡೆ ಬಿಜೆಪಿ, ಮಾದಿಗ ಸಮಾಜದ ಹೋರಾಟಕ್ಕೆ ಸಾಥ್ ನೀಡುತ್ತಿದೆ. ರಾಜಕೀಯವಾಗಿ ಹೋರಾಟ ರೂಪುಗೊಳ್ಳುವಂತೆ ಮಾಡುತ್ತಿದೆ. ಈ ಸಮಯದಲ್ಲಿ ಮಾದಿಗ ಸೇರಿದಂತೆ ಎಲ್ಲಾ ದಲಿತ ಒಳ ಸಮುದಾಯಕ್ಕೆ ಸೂಕ್ತ ಮಾಹಿತಿ ನೀಡಬೇಕು. ಸಮಾಜದ ಒಳತಿಗಾಗಿ ಕೈಗೊಳ್ಳುವ ಕ್ರಮದ ಬಗ್ಗೆ ಸಂಪೂರ್ಣವಾಗಿ ವಿವರಿಸಬೇಕು ಎಂದು ದಲಿತ ನಾಯಕರು ಸಭೆಯಲ್ಲಿ ಸಲಹೆ ನೀಡಿದರು.