Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಸಿ,ಎಸ್‌ಟಿ ಹಣ ಗ್ಯಾರಂಟಿಗೆ ಬಳಕೆ; ದಲಿತ ಶಾಸಕ, ಸಚಿವರು ಸಭೆ

ಬೆಂಗಳೂರು, ಮಾರ್ಚ್ 18: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC ST) ಅಭಿವೃದ್ಧಿಗೆ ಮೀಸಲಿದ್ದ 25 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿಗೆ  ಬಳಸಿದೆ ಎಂದು ಆರೋಪಿಸಿ ಬಿಜೆಪಿ ಹೆಜ್ಜೆ ಹೆಜ್ಜೆಗೂ ಹೋರಾಟ ಮಾಡುತ್ತಿದೆ. ಇದರ ಬೆನ್ನಲ್ಲೇ, ಸಚಿವ ಮಹದೇವಪ್ಪ (HC Mahadevappa) ನಿವಾಸದಲ್ಲಿ ದಲಿತ ನಾಯಕರೆಲ್ಲಾ ಸೇರಿ ಚರ್ಚೆ ನಡೆಸಿದ್ದಾರೆ. ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್​ಸಿಪಿ, ಟಿಎಸ್​ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ. ಹಾಗಾಗಿ ಸರ್ಕಾರಕ್ಕೆ ಗ್ಯಾರಂಟಿಗಳಿಗೆ ಎಸ್​ಸಿಪಿ, ಟಿಎಸ್​ಪಿ ಹಣ ನೀಡದಂತೆ ಮನವಿ ಮಾಡುವ ಬಗ್ಗೆ ಕೆಲ ಹಿರಿಯ ಶಾಸಕರು ಸಭೆಯಲ್ಲಿ ಸಲಹೆ ನೀಡಿದ್ದಾರೆ.









ಎಲ್ಲಾ ಇಲಾಖೆಗಳಿಂದ ದಲಿತ ಸಮಾಜಕ್ಕೆ 42 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ವಾಸ್ತವದಲ್ಲಿ ಕೇವಲ 4 ಸಾವಿರ ಕೋಟಿ ರೂಪಾಯಿ ಮಾತ್ರ ಸಮಾಜಕ್ಕೆ ತಲುಪುತ್ತಿದೆ. ವಿವಿಧ ಇಲಾಖೆಗಳ ಫಲಾನುಭವಿ ಯೋಜನೆಗಳಿಗೆ ಸರಿಸುಮಾರು 2 ಲಕ್ಷಕ್ಕಿಂತ ಹೆಚ್ಚು ಅರ್ಜಿ ಸಲ್ಲಿಕೆ ಆಗುತ್ತದೆ. ಆದರೆ ಮೀಸಲಿಟ್ಟ ಹಣದಲ್ಲಿ ಶೇಕಡ 2ರಷ್ಟು ಮಾತ್ರ ಸಮುದಾಯಕ್ಕೆ ತಲುಪುತ್ತಿದೆ. ಈ ಪ್ರಮಾಣ ಕನಿಷ್ಠ ಶೇಕಡ 40 ರಷ್ಟಾದರೂ ಏರಿಕೆಯಾದರೆ ದಲಿತ ಸಮುದಾಯಕ್ಕೆ ಲಾಭಕರ ಎಂದು ಸಭೆಯಲ್ಲಿ ನಾಯಕರು ಚರ್ಚಿಸಿದ್ದಾರೆ.

ದಲಿತ ನಾಯಕರ ಸಭೆಯಲ್ಲಿ ಒಳ ಮೀಸಲಾತಿ ಚರ್ಚೆ


2011ರ ಜನಗಣತಿ ಆಧಾರದಲ್ಲಿ ಒಳ ಮೀಸಲಾತಿ ಘೋಷಣೆ ಬಗ್ಗೆ ಕೆಲವರ ಬೇಡಿಕೆ ಇದೆ. ಆದರೆ ಕಳೆದ 15 ವರ್ಷಗಳಲ್ಲಿ ಸಮುದಾಯದ ಸಂಖ್ಯೆ ಸಾಕಷ್ಟು ಏರಿಕೆ ಆಗಿದೆ. ಹೀಗಾಗಿ ಜನಗಣತಿಯ ಅಂಕಿಅಂಶ ಸದ್ಯಕ್ಕೆ ಯಾರ ಬಳಿಯೂ ಇಲ್ಲ. ಪ್ರಸ್ತುತ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಕಟಿಸಬೇಕು. ಹಾಗಾಗಿ ಸರ್ಕಾರ ವೈಜ್ಞಾನಿಕವಾಗಿ ಒಳ ಮೀಸಲಾತಿ ನೀಡುವ ಬಗ್ಗೆ ಚಿಂತಿಸಬೇಕು. ಇನ್ನೊಂದೆಡೆ ಬಿಜೆಪಿ, ಮಾದಿಗ ಸಮಾಜದ ಹೋರಾಟಕ್ಕೆ ಸಾಥ್ ನೀಡುತ್ತಿದೆ. ರಾಜಕೀಯವಾಗಿ ಹೋರಾಟ ರೂಪುಗೊಳ್ಳುವಂತೆ ಮಾಡುತ್ತಿದೆ. ಈ ಸಮಯದಲ್ಲಿ ಮಾದಿಗ ಸೇರಿದಂತೆ ಎಲ್ಲಾ ದಲಿತ ಒಳ ಸಮುದಾಯಕ್ಕೆ ಸೂಕ್ತ ಮಾಹಿತಿ ನೀಡಬೇಕು. ಸಮಾಜದ ಒಳತಿಗಾಗಿ ಕೈಗೊಳ್ಳುವ ಕ್ರಮದ ಬಗ್ಗೆ ಸಂಪೂರ್ಣವಾಗಿ ವಿವರಿಸಬೇಕು ಎಂದು ದಲಿತ ನಾಯಕರು ಸಭೆಯಲ್ಲಿ ಸಲಹೆ ನೀಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*