ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಪ್ರತಿ ವಾರವೂ ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿ ಮಾಡುತ್ತಿದ್ದಾರೆ. ಈಗ ನಟ, ನಟಿಯರ ಭೇಟಿಗೆ ದರ್ಶನ್ ನಿರಾಕರಣೆ ಮಾಡಿದ್ದಾರೆ. ‘ಸ್ವಲ್ಪ ದಿನದಲ್ಲಿ ಜಾಮೀನು ಸಿಗುತ್ತದೆ. ನಾನೇ ಬರುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ ಎಂದು ವರದಿ ಆಗಿದೆ. ಇಂದು (ಅಕ್ಟೋಬರ್ 28) ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳಿ ದರ್ಶನ್ ಭೇಟಿಗೆ ಅವಕಾಶ ಕೇಳುತ್ತಿದ್ದಾರೆ ಎನ್ನಲಾಗಿದೆ. ನಟ ನಟಿಯರ ಭೇಟಿ ಕುರಿತು ಪತಿ ದರ್ಶನ್ ಜೊತೆ ವಿಜಯಲಕ್ಷ್ಮೀ ಮಾತನಾಡಿದ್ದಾರೆ. ಆದರೆ ಸದ್ಯಕ್ಕೆ ಯಾರೂ ಬರುವುದು ಬೇಡ ಎಂದು ದರ್ಶನ್ ಹೇಳಿದ್ದಾರೆ. ಜಾಮೀನಿನ ವಿಚಾರದಲ್ಲಿ ಅವರು ಪಾಸಿಟಿವ್ ಆಗಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.