Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಜಂಬೂ ಸವಾರಿ ಉತ್ಸವ ಧಾರವಾಡದಲ್ಲಿ ಗಮನಸೆಳೆದ ದಸರಾ ಜಂಬೂ ಸವಾರಿ ಉತ್ಸವ

ಧಾರವಾಡ,ಅ.೦೨: ನಾಡಹಬ್ಬ ದಸರಾ ಎಂದರೆ ನಮಗೆಲ್ಲ ನೆನಪಾಗುವುದು ಮೈಸೂರು ದಸರಾ ಜಂಬೂ ಸವಾರಿ ಉತ್ಸವ. ಆ ಮೈಸೂರು ಜಂಬೂ ಸವಾರಿ ಉತ್ಸವದ ಮಾದರಿಯಲ್ಲೇ ಧಾರವಾಡದಲ್ಲೂ ಪ್ರತಿವರ್ಷ ಜಂಬೂ ಸವಾರಿ ಉತ್ಸವ ಮಾಡಲಾಗುತ್ತದೆ. ಜಂಬೂ ಸವಾರಿ ಉತ್ಸವ ಸಮಿತಿ ವತಿಯಿಂದ ಪ್ರತಿವರ್ಷ ನಡೆಸಲಾಗುವ ಈ ಜಂಬೂ ಸವಾರಿ ಉತ್ಸವ ಪ್ರಸಕ್ತ ವರ್ಷ ಕೂಡ ಅದ್ಧೂರಿಯಿಂದ ನೆರವೇರಿತು. ಎರಡು ಆನೆಗಳು ಈ ಉತ್ಸವದಲ್ಲಿ ಪಾಲ್ಗೊಂಡಿದ್ದವು. ಅಂಬಾರಿ ಒಳಗಡೆ ಬಂಡೆಮ್ಮ ದೇವಿಯ ಮೂರ್ತಿ ಇಟ್ಟು ಆ ಅಂಬಾರಿ ಹೊತ್ತ ಆನೆಯ ಮೆರವಣಿಗೆಗೆ ಗಾಂಧಿನಗರ ಈಶ್ವರ ದೇವಸ್ಥಾನದಿಂದ ಚಾಲನೆ ನೀಡಲಾಯಿತು.ಈ ಜಂಬೂ ಸವಾರಿ ಉತ್ಸವಕ್ಕೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಬೆಳಗಾವಿ ಸಂಸದ ಜಗದೀಶ ಶೆಟ್ಟರ್, ಗುರುರಾಜ ಹುಣಸಿಮರದ ಸೇರಿದಂತೆ ಅನೇಕ ಮಠಾಧೀಶರು ಪುಷ್ಪ ಹಾಕುವ ಮೂಲಕ ಚಾಲನೆ ನೀಡಿದರು.ಅಲ್ಲಿಂದ ಆರಂಭವಾದ ಜಂಬೂ ಸವಾರಿ ಉತ್ಸವವು ವಿದ್ಯಾಗಿರಿ, ಹೊಸಯಲ್ಲಾಪುರ, ಗಾಂಧಿಚೌಕ್, ಸುಭಾಷ ರಸ್ತೆ ಮೂಲಕ ಕಲಾಭವನದವರೆಗೂ ಸಾಗಿತು. ಈ ಉತ್ಸವದಲ್ಲಿ ದಿಂಡಿ ಮೇಳ, ಪುರವಂತರ ಮೇಳ, ಬೊಂಬೆ ಕುಣಿತ ಸೇರಿದಂತೆ ಇತ್ಯಾದಿ ಮೇಳದವರು ಪಾಲ್ಗೊಂಡಿದ್ದರು. ಈ ಜಂಬೂ ಸವಾರಿ ಉತ್ಸವವನ್ನು ಧಾರವಾಡದ ಜನ ರಸ್ತೆ ಬದಿ ನಿಂತು ಕುತೂಹಲದಿಂದ ವೀಕ್ಷಿಸಿದರು. ಒಟ್ಟಾರೆ ದಸರಾ ಹಬ್ಬದಂದು ಧಾರವಾಡದಲ್ಲಿ ನಡೆದ ಈ ಜಂಬೂ ಸವಾರಿ ಉತ್ಸವ ಕೂಡ ಎಲ್ಲರ ಗಮನಸೆಳೆಯಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನುಹುಬ್ಬಳ್ಳಿಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರಸ್ವಾಮೀಜಿ ಹಾಗೂ ಹಾರನಹಳ್ಳಿಯ ಕೋಡಿಮಠದ ರಾಜಯೋಗೀಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಚಾಲನೆ ಸಿಗಲಿದೆ. ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ, . ಮಾಜಿ ಮುಖ್ಯ ಮಂತ್ರಿ ಜಗದೀಶ ಶಟ್ಟರ ಗುರುರಾಜ ಹುಣಸಿಮರದ, ಸೀಮಾ ಮಸೂತಿ, ಮಾಜಿ ಪಾಲಿಕೆ ಉಪ ಮಹಾಪೌರ ದೀಪಕ ಚಿಂಚೋರೆ ಸೇರಿದಂತೆ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ