LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿದ್ಯುತ್ ಸ್ಪರ್ಶದಿಂದ ವನ್ಯ ಜೀವಿಗಳ ಸಾವು: ಹೈಕೊರ್ಟ್ ಸ್ವಯಂಪ್ರೇರಿತ ಕೇಸ್ ಫೈಲ್

ಬೆಂಗಳೂರು: ಆನೆಗಳು ಸೇರಿದಂತೆ ವನ್ಯ ಜೀವಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯ ಆಧಾರದ ಮೇಲೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣ ಸಂಬಂಧ ಅರ್ಜಿ ದಾಖಲಿಸಿದೆ.


ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್​, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಂಬಂಧ ಮುಂದಿನ ವಿಚಾರಣೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.


ರಾಜ್ಯದ ವನ್ಯಜೀವಿ ಧಾಮಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಆನೆಗಳು ಸೇರಿದಂತೆ ಇತರೆ ವನ್ಯಜೀವಿಗಳು ಅಸ್ವಾಭಾವಿಕ ಸಾವು ಗಂಭೀರವಾಗಿದೆ. ಘಟನೆ ಕುರಿತಂತೆ ಯಾವುದೇ ಎಚ್ಚರಿಕಾ ಕ್ರಮಗಳು ಇಲ್ಲವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗಳಿಗೆ ಕಾರಣವಾಗಿದೆ. ವನ್ಯಜೀವಿಧಾಮ ಮತ್ತು ರಕ್ಷಿತಾರಣ್ಯಗಳು ಮಾತ್ರವಲ್ಲದೆ, ಇತರೆ ಭಾಗಗಳಲ್ಲಿಯೂ ಆನೆಗಳು ಸೇರಿದಂತೆ ವನ್ಯಜೀವಿಗಳ ರಕ್ಷಣ ಮಾಡಬೇಕಾಗಿದೆ.


ಅಶ್ವತ್ಥಾಮ ಎಂಬ ಆನೆ ಮೈಸೂರಿನಲ್ಲಿ ಸಾವಿಗೀಡಾಗಿತ್ತು. ಅಲ್ಲದೆ, ಚಿಕ್ಕಮಗಳೂರಿನಲ್ಲಿ ಮತ್ತೊಂದು ಆನೆ ಹಾಗೂ ಮಡಿಕೇರಿಯಲ್ಲಿ ಎರಡು ಆನೆಗಳು ಸಾವಿಗೀಡಾಗಿದ್ದವು. ರಾಜ್ಯದಲ್ಲಿ ವಿದ್ಯುತ್ ಸ್ಪರ್ಶ ಮತ್ತು ಅಸ್ವಭಾವಿಕ ಕಾರಣಗಳಿಂದ ವನ್ಯಜೀವಿಗಳು ಸಾವನ್ನಪ್ಪುತ್ತಿವೆ. ಈ ಅಂಶ ಮತ್ತು ಮಾಧ್ಯಮಗಳ ವರದಿಗಳು ಪ್ರಕಾರ ಅಧಿಕಾರಿಗಳ ನಿಲರ್ಕ್ಷವೇ ಮತ್ತು ಎಚ್ಚರಿಕೆ ವಹಿಸದಿರುವುದೇ ಕಾರಣವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ