Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಸ್ಪರ್ಶದಿಂದ ವನ್ಯ ಜೀವಿಗಳ ಸಾವು: ಹೈಕೊರ್ಟ್ ಸ್ವಯಂಪ್ರೇರಿತ ಕೇಸ್ ಫೈಲ್

ಬೆಂಗಳೂರು: ಆನೆಗಳು ಸೇರಿದಂತೆ ವನ್ಯ ಜೀವಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯ ಆಧಾರದ ಮೇಲೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣ ಸಂಬಂಧ ಅರ್ಜಿ ದಾಖಲಿಸಿದೆ.


ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್​, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಂಬಂಧ ಮುಂದಿನ ವಿಚಾರಣೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.


ರಾಜ್ಯದ ವನ್ಯಜೀವಿ ಧಾಮಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಆನೆಗಳು ಸೇರಿದಂತೆ ಇತರೆ ವನ್ಯಜೀವಿಗಳು ಅಸ್ವಾಭಾವಿಕ ಸಾವು ಗಂಭೀರವಾಗಿದೆ. ಘಟನೆ ಕುರಿತಂತೆ ಯಾವುದೇ ಎಚ್ಚರಿಕಾ ಕ್ರಮಗಳು ಇಲ್ಲವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗಳಿಗೆ ಕಾರಣವಾಗಿದೆ. ವನ್ಯಜೀವಿಧಾಮ ಮತ್ತು ರಕ್ಷಿತಾರಣ್ಯಗಳು ಮಾತ್ರವಲ್ಲದೆ, ಇತರೆ ಭಾಗಗಳಲ್ಲಿಯೂ ಆನೆಗಳು ಸೇರಿದಂತೆ ವನ್ಯಜೀವಿಗಳ ರಕ್ಷಣ ಮಾಡಬೇಕಾಗಿದೆ.


ಅಶ್ವತ್ಥಾಮ ಎಂಬ ಆನೆ ಮೈಸೂರಿನಲ್ಲಿ ಸಾವಿಗೀಡಾಗಿತ್ತು. ಅಲ್ಲದೆ, ಚಿಕ್ಕಮಗಳೂರಿನಲ್ಲಿ ಮತ್ತೊಂದು ಆನೆ ಹಾಗೂ ಮಡಿಕೇರಿಯಲ್ಲಿ ಎರಡು ಆನೆಗಳು ಸಾವಿಗೀಡಾಗಿದ್ದವು. ರಾಜ್ಯದಲ್ಲಿ ವಿದ್ಯುತ್ ಸ್ಪರ್ಶ ಮತ್ತು ಅಸ್ವಭಾವಿಕ ಕಾರಣಗಳಿಂದ ವನ್ಯಜೀವಿಗಳು ಸಾವನ್ನಪ್ಪುತ್ತಿವೆ. ಈ ಅಂಶ ಮತ್ತು ಮಾಧ್ಯಮಗಳ ವರದಿಗಳು ಪ್ರಕಾರ ಅಧಿಕಾರಿಗಳ ನಿಲರ್ಕ್ಷವೇ ಮತ್ತು ಎಚ್ಚರಿಕೆ ವಹಿಸದಿರುವುದೇ ಕಾರಣವಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ