LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 158ಕ್ಕೆ ಏರಿಕೆ: 1,000 ಜನರ ರಕ್ಷಣೆ

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 158ಕ್ಕೆ ಏರಿಕೆಯಾಗಿದೆ. 211 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಇಂದು ಬೆಳಗ್ಗೆಯಿಂದ ಪುನರಾರಂಭಿಸಿವೆ. ಕಗ್ಗತ್ತಲು ಹಾಗೂ ಹವಾಮಾನ ವೈಫರೀತ್ಯದಿಂದಾಗಿ ಮಂಗಳವಾರ ತಡರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಸೇನಾ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇದುವರೆಗೆ ಸುಮಾರು 70 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸುಮಾರು 1,000 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಹೇಳಿದೆ. ಸಂತ್ರಸ್ತರಿಗೆ ನಿರ್ಣಾಯಕ ನೆರವು ನೀಡಲು ಹಲವಾರು ರಕ್ಷಣಾ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್