Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ನಿರ್ಧಾರ!

ಧಾರವಾಡ, ಏಪ್ರಿಲ್‌ 22: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. ಇತ್ತ ಕಾಂಗ್ರೆಸ್‌ ನಿಂದ ವಿನೋದ್‌ ಅವರು ಸ್ಪರ್ಧೆ ನಡೆಸಿದ್ದು,ಧಾರವಾಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇನ್ನೂ ಚುನಾವಣಾ ಪ್ರಚಾರದ ನಡೆಸಿದ್ದ ದಿಂಗಾಲೇಶ್ವರ ಸ್ವಾಮೀಜಿಗಳು ಪ್ರಧಾನಿಯೇ ಬಂದು ಹೇಳಿದರೂ ನಾಮಪತ್ರ ಹಿಂಪಡೆಯಲ್ಲ ಎಂದು ಹೇಳಿದ್ದ ಸ್ವಾಮೀಜಿ ಈಗ ಮನಸ್ಸು ಬದಲಿಸಿದ್ದು, ಸ್ವಾಮೀಜಿ ಮನವೊಲಿಸಿದ್ದು ಬಿಜೆಪಿನಾ? ಕಾಂಗ್ರೆಸ್ಸಾ? ಎಂಬ ಪ್ರಶ್ನೆ ಮೂಡಿದೆ

ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ ಸಮುದಾಯದವರ ಮಾತಿಗೆ ಕಟಿಬಿದ್ದು ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆಯುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಇನ್ನೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಸಮುದಾಯದ ಜೊತೆಗೆ ಭಕ್ತರ ವಿರೋಧವನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ದೂರವಾಣಿಯಲ್ಲಿ ಸಂಪರ್ಕಿಸಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ದಿಂಗಾಲೇಶ್ವರ ಸ್ವಾಮೀಜಿಗಳು ಮಾತನಾಡಿ, ನನಗೆ ಈಗಲೂ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಮೇಲೆ ಇರುವ ಅಸಮಾಧಾನ ಸ್ವಲ್ಪವೂ ಕಡಿಮೆಯಾಗಿಲ್ಲ. ಆದರೆ ನೀವು ಮತ್ತು ನಿಮ್ಮ ಕುಟುಂಬದವರು ಮಠದ ಬಗ್ಗೆ ಇಟ್ಟುಕೊಂಡಿರುವ ಗೌರವದಿಂದ ನಿಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ಹಿಂಪಡೆಯುತ್ತಿದ್ದೇನೆ.

ಮುಂದಿನ ದಿನಗಳಲ್ಲಾದರೂ ಪ್ರಹ್ಲಾದ್ ಜೋಷಿಗೆ ನಮ್ಮ ಸಮುದಾಯದ ವಿರುದ್ಧ ಷಡ್ಯಂತ್ರ್ಯ ನಡೆಸುವುದು ಇಲ್ಲವೇ ಎರಡು ಮತ್ತು ಮೂರನೇ ಹಂತದ ನಾಯಕರನ್ನು ತುಳಿಯುವ ಪ್ರವೃತ್ತಿ ಬಿಡುವಂತೆ ಸೂಚನೆ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ