ಬಳ್ಳಾರಿ, ಮೇ.07.: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ವಿ.ಹೆಚ್. ಹುಲುಗಪ್ಪ ಅವರು ತಮ್ಮ 41ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು.
ಈ ವೇಳೆ ಸಂಘದ ರಾಜ್ಯ ಸಂಚಾಲಕ ಅದ್ದಿಗೇರಿ ರಾಮಣ್ಣ ಅವರು ಮಾತನಾಡಿ, ಹುಲುಗಪ್ಪ ಅವರು ಸಂಘಟನೆಯ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಅದ್ದಿಗೇರಿ ರಾಮಣ್ಣ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಹುಲುಗಪ್ಪ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಹಲವಾರು ಕಾರ್ಯಕರ್ತರು ಸಂಘಕ್ಕೆ ಸೇರ್ಪಡೆಗೊಂಡರು.