ಮೂಡಲಗಿ : ಪರಿಸರ ನಮ್ಮ ಬದುಕಿನ ಆಧಾರವಾಗಿದ್ದು ಮಾಲಿನ್ಯ ಮತ್ತು ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ ಎಂದು ತಹಶೀಲ್ದಾರ ಶ್ರೀಶೈಲ ಗುಡಮೆ ಬೇಸರ ವ್ಯಕ್ತಪಡಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಧರ್ಮಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಯಲ್ಲಿ ನಿಸರ್ಗ ಫೌಂಡೇಶನ್ ವತಿಯಿಂದ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರ ನೆಡುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ನೀರು ಮತ್ತು ವಿದ್ಯುತ್ ಉಳಿಸುವುದು ಪರಿಸರ ರಕ್ಷಣೆಗೆ ಸಹಾಯಕ. ಪರಿಸರವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
ನಿಸರ್ಗ ಫೌಂಡೇಶನ್ ಅಧ್ಯಕ್ಷ ಈರಪ್ಪ ಢವಳೇಶ್ವರ ಮಾತನಾಡಿ, ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ಪ್ರಕೃತಿಯನ್ನು ಸಂರಕ್ಷಿಸೋಣ ಎಂದು ಕರೆ ನೀಡಿದರು. ಇದೇ ಸಮಯದಲ್ಲಿ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಿಡಿಪಿಓ ಯಲ್ಲಪ್ಪ ಗದಾಡಿ, ಪುರಸಭೆ ಮುಖ್ಯಧಿಕಾರಿ ತುಕಾರಾಮ ಮಾದರ ಅವರಿಗೆ ನಿಸರ್ಗ ಫೌಂಡೇಶನದಿಂದ ಮೂಡಲಗಿ ತಾಲೂಕಾ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಇಓ ಪ್ರಕಾಶ ಹಿರೇಮಠ, ಉಪ ನೋಂದಣಾಧಿಕಾರಿ ಡಿ ಕೆ ಕುಳ್ಳುರ, ಪಿಎಸ್ಐ ರಾಜು ಪೂಜೇರಿ, ಹೆಸ್ಕಾಂ ಅಧಿಕಾರಿ ಎಮ್ ಎಸ್ ನಾಗನ್ನವರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಶೋಕ ಮದುರೆ, ಮಹಾಂತೇಶ ಹಿಪ್ಪರಗಿ, ಪಶು ವೈದ್ಯಧಿಕಾರಿ ಪ್ರಶಾಂತ ಕುರಭೇಟ, ಸೀಮಾ ತುಂಗಳ, ಕೃಷಿ ಇಲಾಖೆ ಅಧಿಕಾರಿ ಪಿ ಎಚ್ ಹುಲಗಬಾಳ, ಮುಖಂಡರಾದ ಸಂತೋ? ಸೋನವಾಲ್ಕರ, ಮರೆಪ್ಪ ಮರೆಪ್ಪಗೋಳ, ಚನ್ನಪ್ಪ ಅಥಣಿ, ಸುರೇಶ ಸಣ್ಣಕ್ಕಿ, ಹಣಮಂತ ಗುಡ್ಲಮನಿ, ನಿಸರ್ಗ ಫೌಂಡೇಶನ್ ಉಪಾಧ್ಯಕ್ಷ ಮಲ್ಲು ಬೋಳನವರ, ಸದಸ್ಯ ಸಂಜು ಕಮತೆ, ಓಂ ಸಂತಾ, ಸುನೀಲ ಗಸ್ತಿ, ಮಲ್ಲು ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
