Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ 

ಮೂಡಲಗಿ : ಪರಿಸರ ನಮ್ಮ ಬದುಕಿನ ಆಧಾರವಾಗಿದ್ದು ಮಾಲಿನ್ಯ ಮತ್ತು ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ ಎಂದು ತಹಶೀಲ್ದಾರ ಶ್ರೀಶೈಲ ಗುಡಮೆ ಬೇಸರ ವ್ಯಕ್ತಪಡಿಸಿದರು. 
ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಧರ್ಮಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಯಲ್ಲಿ ನಿಸರ್ಗ ಫೌಂಡೇಶನ್ ವತಿಯಿಂದ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರ ನೆಡುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ನೀರು ಮತ್ತು ವಿದ್ಯುತ್ ಉಳಿಸುವುದು ಪರಿಸರ ರಕ್ಷಣೆಗೆ ಸಹಾಯಕ. ಪರಿಸರವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. 
ನಿಸರ್ಗ ಫೌಂಡೇಶನ್ ಅಧ್ಯಕ್ಷ ಈರಪ್ಪ ಢವಳೇಶ್ವರ ಮಾತನಾಡಿ, ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ಪ್ರಕೃತಿಯನ್ನು ಸಂರಕ್ಷಿಸೋಣ ಎಂದು ಕರೆ ನೀಡಿದರು. ಇದೇ ಸಮಯದಲ್ಲಿ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಿಡಿಪಿಓ ಯಲ್ಲಪ್ಪ ಗದಾಡಿ, ಪುರಸಭೆ ಮುಖ್ಯಧಿಕಾರಿ ತುಕಾರಾಮ ಮಾದರ ಅವರಿಗೆ ನಿಸರ್ಗ ಫೌಂಡೇಶನದಿಂದ ಮೂಡಲಗಿ ತಾಲೂಕಾ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 
ಈ ಸಂದರ್ಭದಲ್ಲಿ ಬಿಇಓ ಪ್ರಕಾಶ ಹಿರೇಮಠ, ಉಪ ನೋಂದಣಾಧಿಕಾರಿ ಡಿ ಕೆ ಕುಳ್ಳುರ, ಪಿಎಸ್‌ಐ ರಾಜು ಪೂಜೇರಿ, ಹೆಸ್ಕಾಂ ಅಧಿಕಾರಿ ಎಮ್ ಎಸ್ ನಾಗನ್ನವರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಶೋಕ ಮದುರೆ, ಮಹಾಂತೇಶ ಹಿಪ್ಪರಗಿ, ಪಶು ವೈದ್ಯಧಿಕಾರಿ ಪ್ರಶಾಂತ ಕುರಭೇಟ, ಸೀಮಾ ತುಂಗಳ, ಕೃಷಿ ಇಲಾಖೆ ಅಧಿಕಾರಿ ಪಿ ಎಚ್ ಹುಲಗಬಾಳ, ಮುಖಂಡರಾದ ಸಂತೋ? ಸೋನವಾಲ್ಕರ, ಮರೆಪ್ಪ ಮರೆಪ್ಪಗೋಳ, ಚನ್ನಪ್ಪ ಅಥಣಿ, ಸುರೇಶ ಸಣ್ಣಕ್ಕಿ, ಹಣಮಂತ ಗುಡ್ಲಮನಿ, ನಿಸರ್ಗ ಫೌಂಡೇಶನ್ ಉಪಾಧ್ಯಕ್ಷ ಮಲ್ಲು ಬೋಳನವರ, ಸದಸ್ಯ ಸಂಜು ಕಮತೆ, ಓಂ ಸಂತಾ, ಸುನೀಲ ಗಸ್ತಿ, ಮಲ್ಲು ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾತಂಗಿ ಸಮಾಜದಿಂದ ವಿಶೇಷ ಪೂಜೆ, ಸರ್ಕಾರಕ್ಕೆ ಮನವಿಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ ಪ್ರಕಾಶ ಕೆಳಗೇರಿ ವೇಯ್ಟ ಲಿಫ್ಟಿoಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆಪ್ಲಾಸ್ಟಿಕ ಮುಕ್ತ ಜೀವನ ಶೈಲಿ ಅಲವಡಿಸಕೊಳ್ಳಿ: ಸದಾಶಿವ ಮಕ್ಕೋಜಿವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:*ಡಿಸಿಎಂ ಸ್ಥಾನಕ್ಕಾಗಿ ಮಸೀದಿ ದರ್ಗಾದಲ್ಲಿ ಪ್ರಾರ್ಥನೆ; ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಸಂದೇಶ*