Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಮದ್ಯನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ದೆಹಲಿ,23: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಹಾಗೂ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಇದಕ್ಕೂ ಮುನ್ನ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು.

ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಈ ಮೊದಲು ಹೇಳಿತ್ತು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*