Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣಜಿಗ ಸಮಾಜಕ್ಕೆ ಶಿಕ್ಷಣ, ಉದ್ಯೋಗದಲ್ಲಿ ೨ಎ ಮೀಸಲಾತಿಗೆ ಆಗ್ರಹ


ಯರಗಟ್ಟಿ: ಶೈಕ್ಷಣಿಕವಾಗಿ ಹಿಂದುಳಿದಿರುವ ಬಣಜಿಗ ಸಮಾಜದವರಿಗೆ ಶಿಕ್ಷಣ ಹಾಗೂ ಉದ್ಯೋಗ ಎರಡರಲ್ಲೂ ೨ಎ (ಗ್ರೂಪ್-ಬಿ) ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಎಮ್. ವ್ಹಿ. ಗುಂಡಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು.
ಯರಗಟ್ಟಿ ತಾಲೂಕಾ ಬಣಜಿಗ ಸಮುದಾಯದ ಮುಖಂಡ ಮಹಾಂತೇಶ ಗೋಡಿ ಮಾತನಾಡಿದ ಅವರು ಪ್ರಕರಣದಲ್ಲಿ ನ್ಯಾಯಮೂರ್ತಿ ಸುರಜ್ ಗೋವಿಂದರಾಜ ಅವರ ಏಕಸದಸ್ಯ ಪೀಠವು ಬಣಜಿಗ ಸಮಾಜವನ್ನು ಶಿಕ್ಷಣದಲ್ಲಿ ಗ್ರೂಪ್-ಬಿ ಹಾಗೂ ಉದ್ಯೋಗದಲ್ಲಿ ಗ್ರೂಪ್-ಡಿ ಎಂದು ವರ್ಗೀಕರಿಸಿರುವುದು ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಹೇಳಿದರು. ಬಣಜಿಗ ಸಮಾಜ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಇನ್ನೂ ಹಿಂದುಳಿದಿದೆ. ಪ್ರಸ್ತುತ ಶಿಕ್ಷಣದಲ್ಲಿ ೨ಎ (ಗ್ರೂಪ್-ಬಿ) ಹಾಗೂ ಉದ್ಯೋಗದಲ್ಲಿ ೩ಎ (ಗ್ರೂಪ್-ಡಿ) ಮೀಸಲಾತಿ ಇರುವುದರಿಂದ ಶಿಕ್ಷಣ ಪಡೆದ ಅನೇಕ ಯುವಕರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ ಎಂದು ಅವರು ತಿಳಿಸಿದರು.
ಹೀಗಾಗಿ ಬಣಜಿಗ ಸಮಾಜದ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ಸ್ಥಿತಿಯನ್ನು ಪರಿಗಣಿಸಿ, ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಎರಡರಲ್ಲೂ ೨ಎ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ತಾಲ್ಲೂಕಿನ ಸಮಾಜದ ಮುಖಂಡ ಮಹಾಂತೇಶ ಜಕಾತಿ, ರಾಜೇಂದ್ರ ವಾಲಿ, ಪಂಚಾಕ್ಷರಿ ಪಟ್ಟಣಶೆಟ್ಟಿ, ಮಹಾಂತೇಶ ಕಾಶನ್ನವರ, ಶಿವಾನಂದ ಪಟ್ಟಣಶೆಟ್ಟಿ, ಸುನೀಲ ಬೆಲ್ಲದ, ಶಿವಾನಂದ ಯರಗಣವಿ, ತಮ್ಮಣ್ಣ ವಾಲಿ, ಶ್ರೀಶೈಲ ವಾಲಿ, ಸುರೇಶ ತಲ್ಲೂರು, ಬಸವರಾಜ ವಾಲಿ, ಸಿದ್ಲಿಂಗಪ್ಪ ಗಲಗಲಿ, ಪ್ರಕಾಶ ಹೊಸಕೋಟಿ, ಈರಣ್ಣ ಉಪ್ಪಿನ, ಬಾಬು ಪಟ್ಟೇದ, ಸಂತೋಷ ವಾಲಿ, ಬಸವರಾಜ ಹಸಬಿ, ಪ್ರವೀಣ ಬೆಣ್ಣೆ ಇತರರಿದ್ದರು. 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಖಾಸ್ಗತನ ಮಿರ್ಚಿಬಜಿ-ಪಲಾವ್ ಪ್ರಸಾದ ಸವಿದ ಸದ್ಭಕ್ತರು"ರಾಷ್ಟ್ರಧ್ವಜವು ನಾಗರಿಕರ ದೇಶಭಕ್ತಿಯನ್ನು ಬಲಪಡಿಸುತ್ತದೆ"ಮಂದಿರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ವೇಗ: ಗ್ರಾಮಸ್ಥರೊಂದಿಗೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ ದಕ ಮಾದರಿಯಲ್ಲಿ ಉಕ ದೇವಾಲಯಗಳ ಅಭಿವೃದ್ಧಿಪಡಿಸಿಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಬೋಧಿಸಲು ಮನವಿಮಲೇರಿಯಾ, ಡೆಂಘೀ ಪ್ರಕರಣಗಳಿಗೆ ಅಗತ್ಯ ಕ್ರಮಕೈಗೊಳ್ಳಿವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಆಕಾಶ ನಂದಗಾಂವನಾಳೆ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭರೈತರಲ್ಲಿ ಪರ್ಯಾಯ ಬೆಳೆ ಬೆಳೆಯಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳದೆಹಲಿ ಪೊಲೀಸರು ಪ್ರತಿಭಟನೆ ನಿರತ ವಿದ್ಯಾರ್ಥಿ ಗಳ ಮೇಲೆ   ಶಾಕ್ ಬಟನ್, ಪೆಲ್ಲೆಟ್ ಗನ್ ಬಳಸಿ ದೌರ್ಜನ್ಯ:   ಕ್ರಮ ವಿರುದ್ಧ ಹೊಸಪೇಟೆಯಲ್ಲಿ ಎಐಡಿಎಸ್‌ಒ ಆಕ್ರೋಶ*