Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಂಚಿಗೇರಿಯಲ್ಲಿ ಕೈಪಂಪ್ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹ

 ಸಿರಿಗೇರಿ ಮೇ.04:.. ಸಿರುಗುಪ್ಪ ತಾಲೂಕು ಸಿರಿಗೇರಿ ಹೋಬಳಿಯ ಕೊಂಚಗೇರಿ ಗ್ರಾಮದಲ್ಲಿ, ವಿಶೇಷ ಸಂದರ್ಭಗಳಲ್ಲಿ  ಕುಡಿಯುವ ನೀರಿನ ವ್ಯವಸ್ಥೆಗಾಗಿ ಎರಡು ಕೈ ಪಂಪುಗಳ ವ್ಯವಸ್ಥೆ ಮಾಡಿಸಿಕೊಡಬೇಕೆಂದು ಜನರು ಆಗ್ರಹಪಡಿಸುತ್ತಿದ್ದಾರೆ. ದಿನನಿತ್ಯ ಕರೆಂಟ್ ನಿಂದ ನಡೆಯುವ ಬೋರ್ವೆಲ್ ಗಳಿಂದ ಬಳಕೆಯ ಮತ್ತು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕರೆಂಟ್ ಕೈ ಕೊಡುವ ಸಮಯದಲ್ಲಿ, ಬೋರ್ಗಳು ಕೆಟ್ಟು ಹೋದ ಸಂದರ್ಭದಲ್ಲಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಕಳೆದವಾರ ಮಳೆ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ಕಂಬಗಳ ಲೈನ್ ಮೇಲೆ ಉರಳಿಬಿದ್ದ ಪರಿಣಾಮ, ಎರಡುಮೂರು ದಿನ ವಿದ್ಯುತ್ ಸಮಸ್ಯೆಯಾಗಿತ್ತು. ಇದರಿಂದ ಊರಲ್ಲಿ ನೀರಿನ ಸಮಸ್ಯೆ ತಲೆದೂರಿತ್ತು. ಅಲ್ಲದೆ ಆಗಾಗ ದಿನಗಟ್ಟಲೆ ಕರೆಂಟು ಹೋದಾಗ, ಬೋರುಗಳು ಕೆಟ್ಟು ಹೋದಾಗ ನೀರು ಬರದೆ  ಸಮಸ್ಯೆಯಾಗುತ್ತದೆ. ಇದನ್ನು ತಪ್ಪಿಸಲು ಗ್ರಾಮದಲ್ಲಿ ಎರಡು ಮೂರು ಕೈ ಪಂಪುಗಳನ್ನು ಕೊರೆಸುವುದು ಅವಶ್ಯವಾಗಿದೆ. ಈ ಕುರಿತು ಗ್ರಾಮಾಡಳಿತದಿಂದ, ಗ್ರಾಮದಲ್ಲಿ ಅಗತ್ಯ ನೀರು ಪೂರೈಕೆಗೆ ಗಮನಹರಿಸಬೇಕು, ವಿಶೇಷ ಸಂಕಷ್ಟದ ಸಮಯದಲ್ಲಿ ನೀರಿನ ಕೊರತೆಯಾಗದಂತೆ ಎರಡು ಕೈಪಂಪು ಬೋರು ಕೊರಿಸಬೇಕೆಂದು ಕೊಂಚಗೇರಿ ಗ್ರಾಮಸ್ಥರು ಆಗ್ರಹಪಡಿಸುತ್ತಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ