ಬೆಂಗಳೂರು, (ಏಪ್ರಿಲ್ 07): ಪರಪ್ಪನ ಅಗ್ರಹಾರ ಜೈಲು ಯಾವಾಗಲೂ ಒಂದಲ್ಲಾ ಒಂದು ರೀತಿ ಸುದ್ದಿಯಲ್ಲಿರುತ್ತೆ. ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗನಿಗೆ ರಾಜಾತಿಥ್ಯ ಕೊಟ್ಟ ಆರೋಪ ಹೊತಿದ್ದ ಈ ಜೈಲಿನ ವಿರುದ್ಧ ಈಗ ಹೊಸದೊಂದು ಆರೋಪ ಕೇಳಿ ಬಂದಿದೆ. ವಿಚಾರಣಾಧೀನ ಕೈದಿ ಬಳಿ ಲಂಚಕ್ಕೆ ಬೇಡಿಕೆ ಇಡುವುದರ ಜೊತೆಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು, 2024ರಲ್ಲಿ ಸೊಲದೇವನಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟ ಹಮೀದ್ ಎಂಬಾತ ಅಕ್ಟೋಬರ್ 4ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಆದ್ರೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆತನ ಬಳಿ ಹಣ ಕೇಳುವುದರ ಜೊತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜೈಲಿನಲ್ಲಿ ಹಮೀದ್ ಮೇಲೆ ಆಗಿರುವ ಹಲ್ಲೆ ಸಂಬಂಧ ಆತನ ತಾಯಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾನವ ಹಕ್ಕುಗಳ ಆಯೋಗಕ್ಕೆ ನೀಡಿದ ದೂರಿನಲ್ಲೇನಿದೆ?: ಜೈಲಿನಲ್ಲಿ ಹಮೀದ್ ಮೇಲೆ ಆಗಿರುವ ಹಲ್ಲೆ ಸಂಬಂಧ ಆತನ ತಾಯಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದು, ನನ್ನ ಒಬ್ಬನೇ ಮಗನ ರಕ್ಷಿಸುವಂತೆ ಕೋರಿದ್ದಾರೆ. ಇದೇ ಏಪ್ರಿಲ್ 5ರ ರಾತ್ರಿ 6 ರಿಂದ 7 ಅಧಿಕಾರಿಗಳು ತನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ 30 ಸಾವಿರ ಹಣ ನೀಡುವಂತೆ ಕೇಳಿದ್ದಾರಂತೆ. ಹಣ ನೀಡದಿದ್ದರೇ ಮತ್ತಷ್ಟು ಸಮಸ್ಯೆ ಮಾಡುವುದಾಗಿ ಹೇಳಿದ್ದಾರಂತೆ.. ಗಾಯಗಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸದೇ, ಆಹಾರ ನೀಡದೇ ಹಾಗೂ ಮೂಲಸೌಕರ್ಯ ಸಹ ನೀಡದೇ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾಳೆ.
ಅಕ್ರಮಗಳ ಕೂಪವಾಗಿರುವ ಪರಪ್ಪನ ಅಗ್ರಹಾರ ಜೈಲು: ಪರಪ್ಪನ ಅಗ್ರಹಾರ ಕಾರಾಗೃಹದ ಅಕ್ರಮಗಳು ಬಗೆದಷ್ಟೂ ಬಯಲಾಗುತ್ತಿದ್ದು, ಇದಕ್ಕೆ ಬ್ರೇಕ್ ಬೀಳಬೇಕಿದೆ. ಪರಪ್ಪನ ಅಗ್ರಹಾರ ಕಾರಾಗೃಹ ವಿಭಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕೆಲವೇ ದಿನಗಳಲ್ಲಿ ಜೈಲು ಮೂರು ಭಾಗವಾಗಿ ಹೋಳಾಗಲಿದೆ. ಈ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ತರುವ ಜೊತೆಗೆ ಅಕ್ರಮ ಚಟುವಟಿಕೆಗೆ ಶಾಶ್ವತ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.