Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಚೆನ್ನಮ್ಮಾಜಿಯ 200ನೇ ವಿಜಯೋತ್ಸವದ ಅದ್ಧೂರಿ ಆಚರಣೆಗೆ ಆಗ್ರಹ

ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮ ಜಿ ಅವರ ಐತಿಹಾಸಿಕವಾದ ೨೦೦ ವಿಜಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹಪಡಿಸಿದೆ.

ಈ ಕುರಿತಂತೆ ರಾಚವಿಯ ಕುಲಪತಿ ಪ್ರೊ ಸಿ.ಎಂ.
ತ್ಯಾಗರಾಜ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ,
ಹೋರಾಟ ಸಮಿತಿಯ ಸಂಚಾಲಕ ಮಂಜುನಾಥ ವಸ್ತ್ರದ ಆಂಗ್ಲರಿಗೆ ಸಿಂಹ ಸಿಂಹ ಸ್ವಪ್ನವಾಗಿ ಕಾಡಿದ್ದ ಕಿತ್ತೂರು ಸಂಸ್ಥಾನದ ಕಿಚ್ಚನ್ನು ಬಡೆದೆಬ್ಬಿಸಿತ್ತು. ವೀರರಾಣಿ ಕಿತ್ತೂರು ಚೆನ್ನಮ್ಮಾಜಿಯವರು ಆಂಗ್ಲರ ಸರ್ವಾಧಿಕಾರವನ್ನು ಧಿಕ್ಕರಿಸಿ ಅವರನ್ನು ಯುದ್ಧದಲ್ಲಿ ಸೋಲಿಸಿದರು.

ಈ ಐತಿಹಾಸಿಕ ವಿಷಯದ ಕುರುವಾಗಿ ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುತ್ತಿದೆ ಈ ಬಾರಿ ವಿಜಯೋತ್ಸವಕ್ಕೆ ೨೦೦ ವರ್ಷಗಳ ಸುದೀರ್ಘ ಇತಿಹಾಸದ ವಿಶೇಷತೆ ಇದೆ. ಹಾಗಾಗಿ ಈ ದಿನವನ್ನು ಇನ್ನೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮುಂದಾಗ ಬೇಕೆಂದು ಅವರು ಹೇಳಿದರು.

ಕಿತ್ತೂರಿನ ಸಮರಂಗಣದಲ್ಲಿ ದಿಟ್ಟತನದಿಂದ ಹೋರಾಡಿದ ಅಮಟೂರು ಬಾಳಪ್ಪ, ಸರದಾರ ಗುರುಸಿದ್ದಪ್ಪ, ಬಿಚ್ಚುಗತ್ತಿಯ ಚನ್ನಬಸಪ್ಪ, ಗಜವೀರ, ಸಂಗೊಳ್ಳಿ ರಾಯಣ್ಣ, ಸೇರಿದಂತೆ ಇನ್ನೂ ಹಲವಾರು ಕಿತ್ತೂರಿನ ಕಲಿಗಳ ತ್ಯಾಗ ಬಲಿದಾನ ದೇಶಭಕ್ತಿ ಯುವ ಸಮೂಹ ಹಾಗೂ ವಿದ್ಯಾರ್ಥಿಗಳಿಗೆ ದಾರಿದೀಪ ಇದ್ದಂತೆ ಹಾಗಾಗಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಎಲ್ಲಾ ಮಹಾವಿದ್ಯಾಲಯಗಳಲ್ಲಿ ಈ ಬಾರಿಯ ೨೦೦ನೇ ವಿಜಯೋತ್ಸವವೂ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು.

ಚೆನ್ನಮ್ಮಾಜಿಯ ಸೇರಿದಂತೆ ಇತರ ಸೇನಾನಿಗಳ ರಾಷ್ಟ್ರಭಕ್ತಿ ಸಮರ್ಪಣಾ ಮನೋಭಾವಗಳ ವ್ಯಕ್ತಿತ್ವದ ಅರಿವು ಮೂಡುವ ನಿಟ್ಟಿನಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು ಎಲ್ಲಾ ಮಹಾವಿದ್ಯಾಲಯಗಳಲ್ಲಿ ನಡೆಸಿ ವರದಿ ನೀಡುವಂತೆ ನಿರ್ದೆಶನ ನೀಡಬೇಕೆಂದು ವಿಶ್ವವಿದ್ಯಾಲಯ ಕುಲಪತಿಗಳನ್ನು ಆಗ್ರಹಿಸಿದರು. ಮನವಿ ಸ್ವೀಕರಿಸಿದ, ಕುಲಪತಿ ನಾವು ಈಗಾಗಲೇ ಈ ಬಗ್ಗೆ ಕಾರ್ಯುನ್ಮುಖರಾಗಿದ್ದು ತಮ್ಮೆಲ್ಲ ಸಲಹೆಗಳನ್ನು ಸಹ ಶ್ರೀಘ್ರ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಡಾ.ಅಡಿವೆಪ್ಪ ಇಟಗಿ, ಉಪನ್ಯಾಸಕರಾದ ಬಸವರಾಜ ಮಠಪತಿ, ಬಾಳಗೌಡ ದೊಡ್ಡಬಂಗಿ, ಹಿರಿಯ ಸಾಹಿತಿ ಸ.ರಾ.ಸೂಳಕೂಡೆ, ನ್ಯಾಯವಾದಿಗಳಾದ ಸುನೀಲ ಸಾಣಿಕೊಪ್ಪ, ಸಿ.ಎಸ್.ಕಠಾಪುರಿಮಠ, ಸೇರಿದ್ದಂತೆ ಇತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ