LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಿತ್ತೂರು ಚೆನ್ನಮ್ಮಾಜಿಯ 200ನೇ ವಿಜಯೋತ್ಸವದ ಅದ್ಧೂರಿ ಆಚರಣೆಗೆ ಆಗ್ರಹ

ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮ ಜಿ ಅವರ ಐತಿಹಾಸಿಕವಾದ ೨೦೦ ವಿಜಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹಪಡಿಸಿದೆ.

ಈ ಕುರಿತಂತೆ ರಾಚವಿಯ ಕುಲಪತಿ ಪ್ರೊ ಸಿ.ಎಂ.
ತ್ಯಾಗರಾಜ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ,
ಹೋರಾಟ ಸಮಿತಿಯ ಸಂಚಾಲಕ ಮಂಜುನಾಥ ವಸ್ತ್ರದ ಆಂಗ್ಲರಿಗೆ ಸಿಂಹ ಸಿಂಹ ಸ್ವಪ್ನವಾಗಿ ಕಾಡಿದ್ದ ಕಿತ್ತೂರು ಸಂಸ್ಥಾನದ ಕಿಚ್ಚನ್ನು ಬಡೆದೆಬ್ಬಿಸಿತ್ತು. ವೀರರಾಣಿ ಕಿತ್ತೂರು ಚೆನ್ನಮ್ಮಾಜಿಯವರು ಆಂಗ್ಲರ ಸರ್ವಾಧಿಕಾರವನ್ನು ಧಿಕ್ಕರಿಸಿ ಅವರನ್ನು ಯುದ್ಧದಲ್ಲಿ ಸೋಲಿಸಿದರು.

ಈ ಐತಿಹಾಸಿಕ ವಿಷಯದ ಕುರುವಾಗಿ ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುತ್ತಿದೆ ಈ ಬಾರಿ ವಿಜಯೋತ್ಸವಕ್ಕೆ ೨೦೦ ವರ್ಷಗಳ ಸುದೀರ್ಘ ಇತಿಹಾಸದ ವಿಶೇಷತೆ ಇದೆ. ಹಾಗಾಗಿ ಈ ದಿನವನ್ನು ಇನ್ನೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮುಂದಾಗ ಬೇಕೆಂದು ಅವರು ಹೇಳಿದರು.

ಕಿತ್ತೂರಿನ ಸಮರಂಗಣದಲ್ಲಿ ದಿಟ್ಟತನದಿಂದ ಹೋರಾಡಿದ ಅಮಟೂರು ಬಾಳಪ್ಪ, ಸರದಾರ ಗುರುಸಿದ್ದಪ್ಪ, ಬಿಚ್ಚುಗತ್ತಿಯ ಚನ್ನಬಸಪ್ಪ, ಗಜವೀರ, ಸಂಗೊಳ್ಳಿ ರಾಯಣ್ಣ, ಸೇರಿದಂತೆ ಇನ್ನೂ ಹಲವಾರು ಕಿತ್ತೂರಿನ ಕಲಿಗಳ ತ್ಯಾಗ ಬಲಿದಾನ ದೇಶಭಕ್ತಿ ಯುವ ಸಮೂಹ ಹಾಗೂ ವಿದ್ಯಾರ್ಥಿಗಳಿಗೆ ದಾರಿದೀಪ ಇದ್ದಂತೆ ಹಾಗಾಗಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಎಲ್ಲಾ ಮಹಾವಿದ್ಯಾಲಯಗಳಲ್ಲಿ ಈ ಬಾರಿಯ ೨೦೦ನೇ ವಿಜಯೋತ್ಸವವೂ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು.

ಚೆನ್ನಮ್ಮಾಜಿಯ ಸೇರಿದಂತೆ ಇತರ ಸೇನಾನಿಗಳ ರಾಷ್ಟ್ರಭಕ್ತಿ ಸಮರ್ಪಣಾ ಮನೋಭಾವಗಳ ವ್ಯಕ್ತಿತ್ವದ ಅರಿವು ಮೂಡುವ ನಿಟ್ಟಿನಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು ಎಲ್ಲಾ ಮಹಾವಿದ್ಯಾಲಯಗಳಲ್ಲಿ ನಡೆಸಿ ವರದಿ ನೀಡುವಂತೆ ನಿರ್ದೆಶನ ನೀಡಬೇಕೆಂದು ವಿಶ್ವವಿದ್ಯಾಲಯ ಕುಲಪತಿಗಳನ್ನು ಆಗ್ರಹಿಸಿದರು. ಮನವಿ ಸ್ವೀಕರಿಸಿದ, ಕುಲಪತಿ ನಾವು ಈಗಾಗಲೇ ಈ ಬಗ್ಗೆ ಕಾರ್ಯುನ್ಮುಖರಾಗಿದ್ದು ತಮ್ಮೆಲ್ಲ ಸಲಹೆಗಳನ್ನು ಸಹ ಶ್ರೀಘ್ರ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಡಾ.ಅಡಿವೆಪ್ಪ ಇಟಗಿ, ಉಪನ್ಯಾಸಕರಾದ ಬಸವರಾಜ ಮಠಪತಿ, ಬಾಳಗೌಡ ದೊಡ್ಡಬಂಗಿ, ಹಿರಿಯ ಸಾಹಿತಿ ಸ.ರಾ.ಸೂಳಕೂಡೆ, ನ್ಯಾಯವಾದಿಗಳಾದ ಸುನೀಲ ಸಾಣಿಕೊಪ್ಪ, ಸಿ.ಎಸ್.ಕಠಾಪುರಿಮಠ, ಸೇರಿದ್ದಂತೆ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್