Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಯಮಿತ ಕಸ ತ್ಯಾಜ್ಯ ಸಂಗ್ರಹಣೆ-ಕುಡಿಯುವ ನೀರಿನ ಪೂರೈಕೆಗೆ  ಆಗ್ರಹ

ಬೆಳಗಾವಿ ಮಾ. 12 : ತಾಲೂಕಿನ ಮುತಗಾ ಗ್ರಾಮ ಪಂಚಾಯತ ಬಡಾವಣೆಗಳಾದ ಶ್ರೀರಾಮ ನಗರ ಕಾಲೋನಿ, ಸಾಯಿ ನಗರ, ಗೋಕುಲ ನಗರ, ವಿನಾಯಕ ನಗರ, ಬಸವ ನಗರಗಳ ನಾಗರೀಕರು ಮೂಲಭೂತ ಸೌಕ್ಯರಗಳಿಂದ ವಂಚಿತರಾಗಿದ್ದು ಮತಗಾ ಗ್ರಾಮ ಪಂಚಾಯತ ಈ ಪ್ರದೇಶಗಳನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ್ದು ಬಹಳಷ್ಟು ಸಲ ವಿನಂತಿಸಿದರೂ ಸಹ ಸ್ಪಂದಿಸಿರುವುದಿಲ್ಲವೆಂದು ಮುತಗಾ ಗ್ರಾಮ ಪಂಚಾಯತ ಸದಸ್ಯ ರವಿ ಕೊಟಬಾಗಿ ಆರೋಪಿಸಿದ್ದು, ನಾಗರೀಕರ ಆಶೋತ್ತರಗಳಿಗೆ ಸ್ಪಂದಿಸಿದೇ ಇದ್ದರೆ ಮುಂಬರುವ ದಿನಗಳಲ್ಲಿ ರಸ್ತೆಗಿಳಿದು ಹೋರಾಟ ಮಾಡುವುದು ಅನಿವಾರ್ಯವೆಂದು ಹೇಳಿದ್ದಾರೆ.

               ಗ್ರಾ.ಪಂ ಸದಸ್ಯ ರವಿ ಕೊಟಬಾಗಿ ನೇತೃತ್ವದಲ್ಲಿ ಬಡಾವಣೆಗಳ ಹಿರಿಯ ನಾಗರೀಕರಾದ ಆರ್. ಆರ್.ಪದಕಿ, ಭಿಮಪ್ಪ ನಬಾಪುರೆ, ರವಿ ಸಾಲಿಮಠ, ಆಕಾಶ್‌ ಶೆಟ್ಟಿ, ಶಿವು ಪಾಟೀಲ ಇವರುಗಳು ಜಿಲ್ಲಾ ಪಂಚಾಯತ್‌ ಮುಖ್ಯ ಲೆಕ್ಕಾಧಿಕಾರಿ ಪಿ.ಬಿ.ದುಡಗಂಟಿ ರವರಿಗೆ ಮನವಿ ಸಲ್ಲಿಸಿ ಜಲ ಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಕಳೆದ ಒಂದು ತಿಂಗಳಿನಿಂದ ನೀರು ಪೂರೈಕೆಯಾಗಿರುವುದಿಲ್ಲ ಮತ್ತು ಈ ಪ್ರದೇಶಗಳಲ್ಲಿ ನಿಯಮಿತವಾಗಿ ಕಸ ಸಂಗ್ರಹಣೆ ವಾಹನ ಬರದೇ ಇರುವುದಿರಂದ ಈ ಬಡಾವಣೆಗಳು ಸಂಪೂರ್ಣವಾಗಿ ಗಬ್ಬೆದ್ದು ನಾರುತ್ತಿವೆ. ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಈ ಪ್ರದೇಶದ ಜನರು ನೀರಿನ ಕೊರತೆಯಿಂದ ಕಂಗೆಟ್ಟಿದ್ದು ತಕ್ಷಣ ನಿಯಮಿತವಾಗಿ ಕುಡಿಯುವ ನೀರಿನ ಪೂರೈಕೆಯನ್ನು ಪ್ರಾರಂಬಿಸುವಂತೆ ಮತ್ತು ನಿಯಮಿತವಾಗಿ ಪಂಚಾಯತ್‌ ವಾಹನದ ಮೂಲಕ ಕಸ ಸಂಗ್ರಹಣೆ ವಿಲೇವಾರಿ ಮಾಡುವಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

              ಮನವಿಗೆ ಸ್ಪಂದಿಸಿದ ಜಿ.ಪಂ. ಮುಖ್ಯಲೆಕ್ಕಾಧಿಕಾರಿ ಪಿ.ಬಿ.ದುಡಗುಂಡಿ ಗ್ರಾ.ಪಂ. ಪಿ.ಡಿ.ಓ ಬಸವಂತ ಕಡೇಮನಿ ಮತ್ತು ತಾಲೂಕಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ರವರನ್ನು ಜಿ.ಪಂ ಗೆ ಕರೆಯಿಸಿ ಸಮಸ್ಯೆಗಳ ಬಗ್ಗೆ ವಿಚಾರಿಸಿ ತಕ್ಷಣ ಪರಿಹರಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಒಂದು ವಾರದೊಳಗೆ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ