ಕಾಗವಾಡ: ಕಾಗವಾಡ ತಾಲೂಕು ಕೇಂದ್ರವಾಗಿ ದಶಕಗಳೇ ಉರುಳಿದೆ. ಆದರೆ
ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೇರೆ ಊರಿನತ್ತ ಮುಖ ಮಾಡುತ್ತಿರುವುದು ಬೇಸರ ಸಂಗತಿಯಾಗಿದೆ ಎಂದು ನಾರಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಳವಳ ವ್ಯಕ್ತಪಡಿಸಿದೆ.
ಶನಿವಾರದಂದು ಚಿಕ್ಕೋಡಿ ಸಂಸದರಾದ. ಕುಮಾರಿ, ಪ್ರಿಯಾಂಕ ಜಾರಕಿಹೊಳಿ ಅವರು ಕಾಗವಾಡ ಪಟ್ಟಣಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಬಂದಾಗ ಸರಕಾರಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳನ್ನು ಸ್ಥಾಪಿಸಿ ಎಂದು ಮನವಿ ನೀಡಿದ್ದರು.
ಮುಂಬರುವ ಶೈಕ್ಷಣಿಕ ವರ್ಷದಿಂದ ಸರಕಾರಿ ಪದವಿ ಮಹಾವಿದ್ಯಾಲಯ ಸ್ಥಾಪನೆಯಾದರೆ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಆದ್ದರಿಂದ ತಾವು ತಕ್ಷಣ ಗಮನಕ್ಕೆ ತೆಗೆದುಕೊಂಡು ಹೊಸ ಸರಕಾರಿ ಮಹಾವಿದ್ಯಾಲಯವನ್ನು ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಸಮಯದಲ್ಲಿ ರೈತ ಅಧ್ಯಕ್ಷರಾದ ಗಣೇಶ ಕೊಳೆಕರ,ಉಪಾಧ್ಯಕ್ಷ ಫಾರೂಕ ಅಲಾಸ್ಕರ, ಸಚಿನ ಗಾವಡೆ ಬಾಬಾಸಾಬ ಕೊತ್ತಲಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
