Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉರ್ದು ಶಾಲೆ ಬಿಸಿಯೂಟ ಅಡುಗೆ ಕೋಣೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ

ಪುರಸಭೆ ಎದುರು ಎಸ್ಡಿಎಂಸಿಯವರಿಂದ ಧರಣಿ
ಮುದ್ದೇಬಿಹಾಳ: ಪಟ್ಟಣದ ಮಹೆಬೂಬನಗರದಲ್ಲಿರುವ ಸರ್ಕಾರಿ ಉರ್ದು ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 50 ಲಕ್ಷ ಅನುದಾನದ ಬಿಸಿಯೂಟ ಕೋಣೆ ಕಾಮಗಾರಿಗೆ ಇ-ಟೆಂಡರ್ ಪಾಸಾಗಿದ್ದರೂ ಇದುವರೆಗೂ ಕಾಮಗಾರಿ ಆರಂಭಿಸದಿರುವುದನ್ನು ವಿರೋಧಿಸಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು ಹಾಗೂ ಪಾಲಕರು ಪುರಸಭೆ ಕಚೇರಿ ಎದುರು ಶುಕ್ರವಾರ ದಿಢಿರ್ ಧರಣಿ ಸತ್ಯಾಗ್ರಹ ನಡೆಸಿದರು.
ಈ ಸಂದರ್ಭ ಮುಖ್ಯಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರ ಪ್ರದರ್ಶಿಸಿದ ಧರಣಿ ನಿರತರು, ಪುರಸಭೆಗೆ 16-09-2025 ರಂದು ಕಾಮಗಾರಿಯ ಪ್ರಾರಂಭಿಸುವ ಕುರಿತು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪುರಸಭೆಯಿಂದ ಸ್ಪಂಧನೆ ದೊರಕಿಲ್ಲ. ಕಾಮಗಾರಿಯೂ ಆರಂಭವಾಗಿಲ್ಲ. ಕೆಲಸ ಪ್ರಾರಂಭವಾಗದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದರೂ ಪುರಸಭೆಯವರು ಗಂಭೀರವಾಗಿ ಪರಿಗಣಿಸಿಲ್ಲ. ಅರ್ಜಿಗೆ ಉತ್ತರವನ್ನೂ ಕೊಡುವ ಸೌಜನ್ಯ ತೋರಿಸಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿ ಈಗಲಾದರೂ ಪುರಸಭೆಯವರು ಎಚ್ಚೆತ್ತುಕೊಂಡು ಕಾಮಗಾರಿ ಪ್ರಾರಂಭಿಸದಿದ್ದರೆ ಧರಣಿ ಸತ್ಯಾಗ್ರಹವನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರು ಮಾತನಾಡಿ, ಈಗಾಗಲೇ ಕಾಮಗಾರಿ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಲಾಗಿದೆ. 2022-23ನೇ ಸಾಲಿನ ಎಸ್.ಎಫ್.ಸಿ ವಿಶೇಷ ಯೋಜನೆಯಡಿ ರೂ 50 ಲಕ್ಷ ಅನುದಾನದಲ್ಲಿ ಶಾಲೆ ಅಭಿವೃದ್ಧಿ ಪಡಿಸುವ ಕಾಮಗಾರಿಯ ಟೆಂಡರದಲ್ಲಿ ತಾಂತ್ರಿಕವಾಗಿ ಅರ್ಹರಾದ 2 ಜನ ಗುತ್ತಿಗೆದಾರರಾದ ಗೊಲಯ್ಯ ಹಿರೇಮಠ, ಶ್ರೀಶೈಲ ವಿಭೂತಿ ಅವರ ತಾಂತ್ರಿಕ ಬಿಡ್‌ಗೆ ಅನುಮೋದನೆ ನೀಡಿ ಆರ್ಥಿಕ ಬಿಡ್ ತೆರೆಯಲು ಆದೇಶಿಸಿದೆ ಎಂದು ತಿಳಿಸಿ ಇದಕ್ಕೆ ಸಂಬಂಧಿಸಿದ ಪತ್ರವನ್ನು ಧರಣಿ ನಿರತರಿಗೆ ನೀಡಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಮೊಹಮ್ಮದ್ ರಫೀಕ್ ನಾಗರಾಳ, ರಿಯಾಜ್ ದೇಸಾಯಿ, ಶಬ್ಬೀರ್ ಸಾತಿಹಾಳ್, ರಜಾಕ್ ಇಲಕಲ್, ಸುಲೇಮಾನ್ ನಾಯ್ಕೋಡಿ, ಅಸ್ಲಾಂ ಕಿತ್ತೂರ್, ಯಾಸಿನ್ ಅತ್ತಾರ್ ಇನ್ನಿತರರು ಇದ್ದರು.
ಬುಧವಾರ ಮಕ್ಕಳ ಸಮೇತ ಪ್ರತಿಭಟನೆ ಎಚ್ಚರಿಕೆ: ಎಸ್ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, 2022-23ರಲ್ಲಿ ಹಿಂದಿನ ಶಾಸಕರು (ಎ.ಎಸ್.ಪಾಟೀಲ ನಡಹಳ್ಳಿ) ಈ ಅನುದಾನ ಕೊಟ್ಟಿದ್ದರು. ಮನವಿ ಮೇಲೆ ಮನವಿ ಕೊಟ್ಟರೂ ಕಾಮಗಾರಿ ಪ್ರಾರಂಭಿಸಿಲ್ಲ. ಭರವಸೆಯಲ್ಲೇ ದಿನದೂಡುತ್ತಿದ್ದಾರೆ. ಬುಧವಾರ ಮಕ್ಕಳ ಸಮೇತ ಪುರಸಭೆಗೆ ಬಂದು ಧರಣಿ ಕೂಡುತ್ತೇವೆ. ಈಗಿನ ಶಾಸಕರಿಗೆ (ಸಿ.ಎಸ್.ನಾಡಗೌಡ) ನಾವು ಸಾಲಿಡ್  ಓಟ್ ಹಾಕಿದ್ದೇವೆ. ಒನ್ ವೇ ಮಾಡಿ ತೋರಿಸಿದ್ದೇವೆ. ಬಿಸಿಯೂಟದ ಕೊಣೆ ಇಲ್ಲದೆ ಮಕ್ಕಳಿಗೆ ಸಾಕಷ್ಟು ಸಮಸ್ಯೆ ಆಗತೊಡಗಿದೆ. ಕೆಲಸ ಪ್ರಾರಂಭಿಸವವರೆಗಾದರೂ ತಗಡಿನ ಶೆಡ್ ಹೊಡೆದು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಚ್ಚರಿಸಿದರು.
ಮುಖ್ಯಾಧಿಕಾರಿ ಪ್ರತಿಕ್ರಿಯೆ: ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರು ಮಾತನಾಡಿ 50 ಲಕ್ಷ ಅನುದಾನದ ಬಿಸಿಯೂಟ ಅಡುಗೆ ಕೋಣೆ ನಿರ್ಮಾಣ ಕಾಮಗಾರಿಗೆ
ತಾಂತ್ರಿಕ ಬಿಡ್ ಓಪನ್ ಆಗಿತ್ತು. ಇದೀಗ ಫೈನಾನ್ಸಿಯಲ್ ಬಿಡ್ ಕೂಡ ಓಪನ್ ಆಗಿದೆ. 2-3 ದಿನದಲ್ಲಿ ಭೂಮಿ ಪೂಜೆ ಮಾಡಿ ಕೆಲಸ ಪ್ರಾರಂಭಿಸುತ್ತೇವೆ ಎಂದು ಧರಣಿ ನಿರತರಿಗೆ ಭರವಸೆ ನೀಡಿ ಧರಣಿ ಕೈಬಿಡುವಂತೆ ಮನವಿ ಮಾಡಿದರು.
ಫೋಟೊ: ಮುದ್ದೇಬಿಹಾಳ: ಧರಣಿ ನಿರತರು ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಚರ್ಚಿಸಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ