LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಾತಾವರಣ ಏರಿಳಿತದಿಂದ ಹೆಚ್ಚಿದ ಡೆಂಗ್ಯೂ ಪ್ರಕರಣಗಳು‌

ಬೆಂಗಳೂರು, ಜೂನ್.02; ದಿಢೀರನೇ ವಾತಾವರಣ ಏರಿಳಿತದಿಂದಾಗಿ ಹಾಗೂ ಮಳೆಗಾಲ ಆರಂಭ ಕಾಲ ಹಿನ್ನಲೆ ಆರೋಗ್ಯದಲ್ಲಿ ಹಲವಾರು ಸಮಸ್ಯೆಗಳು ಕಂಡು ಬರುತ್ತಿವೆ. ಗಂಟಲು ಹಾಗೂ ಕಿವಿ ಸೋಂಕು ಜೊತೆಗೆ ಡೆಂಗ್ಯೂ ಸಂಖ್ಯೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಮಳೆಗಾಲಕ್ಕೆ ರೋಗಗಳು ಹರಡದಂತೆ ತಡೆಗಟ್ಟಲು ಸಲಹೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗಂಟಲು ನೋವು ಜೊತೆಗೆ ಸೋಂಕು ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದಕ್ಕೆ ಕಾರಣ ಪ್ರಮುಖವಾಗಿ ವಾತಾವರಣದಲ್ಲಿ ಏರುಪೇರು. ಇನ್ನೂ ಮಳೆಯಿಂದಾಗಿ ರೋಗಗಳು ಹರಡುವ ಭೀತಿ ಜೊತೆಗೆ ಮುಂದಿನ ವಾರದಲ್ಲಿ ಮಳೆಗಾಲ ಆರಂಭ ಹಿನ್ನಲೆ ಆದಷ್ಟು ಮಳೆಯಲ್ಲಿ ನೆನೆಯುವುದರಿಂದ ದೂರವಿರುವಂತೆ ಹಾಗೂ ಡೆಂಗ್ಯೂ ಪ್ರಕರಣಗಳು‌ ಹೆಚ್ಚಿಗ ಆಗುತ್ತಿವೆ. ಹೀಗಾಗಿ‌ ಡೆಂಗ್ಯೂ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನ ಸಂಪರ್ಕಿಸುವಂತೆ ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರು ಸಲಹೆ ನೀಡುತ್ತಿದ್ದಾರೆ.

ಇನ್ನೂ ಮಳೆಗಾಲ ಸಂದರ್ಭದಲ್ಲಿ ಕುಡಿಯುವ ನೀರಿಗೆ ಮಳೆ ನೀರು ಕಲುಷಿತವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಾಯಿಸಿ ಆರಿಸಿದ ನೀರನ್ನು ಸೇವಿಸಬೇಕು. ಟೈರ್, ತೆಂಗಿನಕಾಯಿ ಚಿಪ್ಪು ಸೇರಿದಂತೆ ನಿಂತ ಮಳೆ‌ನೀರಲ್ಲಿ ಸೊಳ್ಳೆಗಳು ಮೊಟ್ಟೆ ಇಟ್ಟು ಲಾರ್ವಾ ಉತ್ಪತ್ತಿ ಆಗುತ್ತದೆ. ಹೀಗಾಗಿ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಳ ಆಗುತ್ತಿರುವುದರಿಂದ ಸ್ವಚ್ಚತೆ ಕಡೆಗೆ ಗಮನ ಕೊಡಲು ಒತ್ತು ನೀಡಬೇಕೆನ್ನುತ್ತಿದ್ದು, ಮಳೆಯಿಂದ ಸಣ್ಣಪುಟ್ಟ ರೋಗ ಸಮಸ್ಯೆಯಾದರೆ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ವೈದ್ಯರನ್ನ ಸಂಪರ್ಕಿಸುವಂತೆ ವೈದ್ಯರು ಹೃಳುತ್ತಿದ್ದಾರೆ. ಅತ್ತ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳನ್ನ ನೋಡೊದಾದರೆ 2797 ಕೇಸ್ ಗಳಿದ್ದರೆ, ಈ ಪೈಕಿ ಬೆಂಗಳೂರಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 1002 ಪ್ರಕರಣಗಳು ದಾಖಲಾಗಿವೆ.

ಒಟ್ಟಿನಲ್ಲಿ ಮಾನ್ಸೂನ್ ಆರಂಭಕ್ಕೂ ಮುನ್ನ ಇವತ್ತಿನಿಂದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಎಂಟ್ರಿ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣದಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಮಳೆಗಾಲ ಸಂದರ್ಭದಲ್ಲಿ ಆದಷ್ಟು ಆರೋಗ್ಯ ಬಗ್ಗೆ ಜಾಗೃತರಾಗಿರುವುದು ಉತ್ತಮ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್