LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bagalkot

ಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶ

 ಬೀಳಗಿ-   ಕ್ರಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ನಿರಾಶ್ರಿತರಿಗೆ ಇತ್ತೀಚೆಗೆ ಪ್ರಕಟವಾದ ಕೆ.ಎ.ಎಸ್. (KAS) ನೇಮಕಾತಿ ಅಧಿಸೂಚನೆಯಲ್ಲಿ ಮೀಸಲಾತಿ ನೀಡದೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪ. ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀಳಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಬಾಗಲಕೋಟೆ, ವಿಜಯಪುರ,ಬೆಳಗಾವಿ ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಸಾವಿರಾರು ರೈತರು ತಮ್ಮ ಫಲವತ್ತಾದ ಭೂಮಿ, ಮನೆ-ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಪುನರ್ವಸತಿ ನೀತಿಯ ಪ್ರಕಾರ ನಿರಾಶ್ರಿತ ಕುಟುಂಬದ ಒಬ್ಬರಿಗೆ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವುದು ಸರ್ಕಾರದ ಆದೇಶವಿದೆ. ಆದರೆ KPSC ಪ್ರಕಟಿಸಿದ KAS ನೇಮಕಾತಿಯಲ್ಲಿ ಈ ಮೀಸಲಾತಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ಯೋಜನೆಗಾಗಿ ಸರ್ವಸ್ವ ತ್ಯಾಗ ಮಾಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಸರ್ಕಾರದ ಕರ್ತವ್ಯ. ಭೂಮಿ ಕಳೆದುಕೊಂಡವರಿಗೆ ಉದ್ಯೋಗದಲ್ಲೂ ಅನ್ಯಾಯ ಮಾಡಿದರೆ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಇದು ರೈತ ವಿರೋಧಿ ನಡೆ ಎಂದು ಹಿರೇಮಠ ಕಿಡಿಕಾರಿದರು.
ಕೂಡಲೇ KAS ನೇಮಕಾತಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರಾಶ್ರಿತರಿಗೆ ನಿಗದಿತ ಮೀಸಲಾತಿ ಕಲ್ಪಿಸಬೇಕು. ಇಲ್ಲದಿದ್ದರೆ ಭಾರತೀಯ ಕಿಸಾನ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ