Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬನಿಯಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಕೊಳ್ಳಲು ರೈತರಿಗೆ ಇಲಾಖೆ ಸಲಹೆ

ಗದಗ ಡಿಸೆಂಬರ್ 31: ರೈತರು ಕಟಾವು ಮಾಡಿದ ಕೃಷಿ ಉತ್ಪನ್ನಗಳನ್ನು ರಾತ್ರಿ  ಇಬ್ಬನಿ/ ಮಂಜಿನಿAದ ರಕ್ಷಿಸಲು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಲು ಸಲಹೆ ನೀಡಲಾಗಿದೆ.


ಜೋಳ ಮತ್ತು ಮೆಕ್ಕೆಜೋಳ ಬೆಳೆಗಳ ಬೆಳವಣಿಗೆ ಹಂತದಲ್ಲಿ ಸೈನಿಕ ಹುಳುವಿನ ನಿಯಂತ್ರಣಕ್ಕಾಗಿ, 2 ಗ್ರಾಂ ಇಮಾಮೆಕ್ಟಿನ ಬೆಂಝೋಯೇಟ ಅಥವಾ 4.0 ಮಿ. ಲೀ. ಫೈನೋಟೆರಾನ್ 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.


ಮೊದಲೇ ಬಿತ್ತಿದ ತೊಗರಿ ಬೆಳೆ ಕೊಯ್ಲು ಹಂತದಲ್ಲಿದ್ದು ಕಟಾವನ್ನು ಪೂರ್ಣಗೊಳಿಸಿ ಮತ್ತು ಬಿಸಿಲಿನಲ್ಲಿ ಒಣಗಿಸಬೇಕು. ಕಾಯಿಕೊರಕ (ಹೆಲಿಕೋವರ್ಪಾ) ನಿರ್ವಹಣೆಗಾಗಿ ಕ್ಲೋರಂಟ್ರಾನಿಲಿಪ್ರೋಲ್ 0.15 ಮಿ. ಲೀ. ಅಥವಾ ಇಂಡಾಕ್ಸಿಕಾರ್ಬ 0.3 ಗ್ರಾಂ ಸಿಂಪಡಿಸಬೇಕು.


ಕುಸುಬೆಯಲ್ಲಿ ಬೆಳವಣಿಗೆಯಿಂದ ಹೂವಾಡುವ ಹಂತದಲ್ಲಿ ರಸ ಹೀರುವ ಕೀಟದ ನಿರ್ವಹಣೆಗಾಗಿ 0.2 ಗ್ರಾಂ ಥೈಯಾಮಿಥಾಕ್ಸಾಮ್ 25 ಡಬ್ಲೂ.ಜಿ. ಅಥವಾ 1.0 ಗ್ರಾಂ ಅಸಿಫೇಟ್ 75 ಎಸ್.ಪಿ. ಅಥವಾ 1.7 ಮಿ.ಲೀ. ಡೈಮಿಥೊಯೇಟ್ 30 ಇ.ಸಿ. ಪ್ರತಿ ನೀರಿಗೆ ಬೆರೆಸಿ ಸಿಂಪಡಿಸಬೇಕು.


ಕಡಲೆಯಲ್ಲಿ 30-40 ದಿನದ ಬೆಳೆ ಇದ್ದಾಗ ಕುಡಿ ಚಿವುಟುವುದರಿಂದ ಇಳುವರಿ ಹೆಚ್ಚಲು ಅನುಕೂಲವಾಗುವುದು. ಪಲ್ಸ್ ಬೂಸ್ಟರ್ ನ್ನು ಶೇ. 25 ರಷ್ಟು ಹೂವಾಡುವ ಸಮಯದಲ್ಲಿ 10ಗ್ರಾಂ./ಲೀ ನಂತೆ ಬೆಳೆಗೆ ಸಿಂಪರಣೆ ಮಾಡಿದರೆ ಹೆಚ್ಚಿನ ಇಳುವರಿ ಪಡೆಯಲು ಸಹಕಾರಿಯಾಗುತ್ತದೆ. ಪಲ್ಸ್ ಬೂಸ್ಟರ್ ಕೃಷಿ ವಿಶ್ವ ವಿದ್ಯಾಲಯ, ಧಾರವಾಡದಲ್ಲಿ ಲಭ್ಯವಿರುತ್ತದೆ.


ಪ್ರಸಕ್ತ ವರ್ಷ ಕಡಲೆ ಬೆಳೆಯಲ್ಲಿ ಸಿಡಿ ರೋಗದ ಪ್ರಮಾಣ ಸ್ವಲ್ಪ ಜಾಸ್ತಿ ಕಂಡುಬAದಿದೆ. ಮುಂಗಾರಿಯಲ್ಲಿ ಹೆಸರು, ಶೇಂಗಾ ಬೆಳೆದ ಜಮೀನಿನಲ್ಲಿ ಹೆಚ್ಚಾಗಿ ಕಂಡು ಬಂದಿದ್ದು ರೈತರು ಬೆಳೆ ಪರಿವರ್ತನೆ (ಏಕದಳ-ದ್ವಿದಳ/ ದ್ವಿದಳ- ಏಕದಳ ) ಮಾಡಿದಲ್ಲಿ ಹಾಗೂ ಬೀಜೋಪಚಾರ ಕೈಗೊಂಡಲ್ಲಿ ಸುಲಭವಾಗಿ ನಿರ್ವಹಣೆ ಮಾಡಬಹುದಾಗಿದೆ.


ಬೆಳೆಗಳ ನಿಯಮಿತ ಪರಿವೀಕ್ಷಣೆ ಕೈಗೊಂಡು, ಕಾಲಕಾಲಕ್ಕೆ ಬೇಕಾಗುವ ಸಸ್ಯ ಸಂರಕ್ಷಣಾ ಕ್ರಮಗಳನ್ನು ಹಾಗೂ ಬೆಳೆಗಳಿಗೆ ಬೇಕಾದ ಪೋಷಕಾಂಶ ನಿರ್ವಹಣೆಯನ್ನು ಕೈಗೊಳ್ಳಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ