LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಕಾಮಗಾರಿಗಳ ಪರಿಶೀಲಿಸಿದ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ

ವಿಬಿ ಜಿ ರಾಮ್ ಜಿ ಯೋಜನೆಯಡಿ ಕ್ಷೇತ್ರ ಭೇಟಿ


ತಾಳಿಕೋಟೆ, ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ ವಿಬಿ-ಜಿ ರಾಮ್-ಜಿ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಮಂಗಳವಾರ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪೂರ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
      ಶಿವಪೂರ ಗ್ರಾಮದ ಸರ್ವೆ ನಂ.೧೦೪ರ ಗಾಂ ಠಾಣ ಜಾಗದಲ್ಲಿ ನಡೆಯುತ್ತಿದ್ದ ಕಂದಕಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪ್ರಗತಿ ಹಾಗೂ ಸೃಜನೆಯಾಗಿರುವ ಮಾನವ ದಿನಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಅವರ ಕುಂದು-ಕೊರತೆಗಳನ್ನು ಆಲಿಸಿದರು. ಕೂಲಿಕಾರರ ಶ್ರಮವನ್ನು ಗೌರವಿಸಿ ಸನ್ಮಾನಿಸಿದರು. ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗದ ಅಗತ್ಯ ಹೆಚ್ಚಿರುವುದರಿಂದ, ಹೆಚ್ಚಿನ ಸಂಖ್ಯೆಯ ಅರ್ಹರಿಗೆ ನಿರಂತರವಾಗಿ ಕೆಲಸ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯಡಿ ಪ್ರತಿ ದಿನ ೩೮೨ ಕೂಲಿ ಹಾಗೂ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ ೧೨೫ ದಿನಗಳ ಉದ್ಯೋಗಾವಕಾಶ ದೊರೆಯಲಿದ್ದು, ಅರ್ಹ ಗ್ರಾಮೀಣ ಕುಟುಂಬಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
       ಇದೇ ಸಂದರ್ಭದಲ್ಲಿ ಶಿವಪೂರ ಗ್ರಾಮದ ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸ್ವತಃ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಚಾಲನೆ ನೀಡಿದರು. ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಕೂಲಿಕಾರರಿಗೆ ಕಡ್ಡಾಯವಾಗಿ ಉದ್ಯೋಗ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
      ಈ ಸಂದರ್ಭದಲ್ಲಿ ತಾಳಿಕೋಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನುಸೂಯಾ ಚಲವಾದಿ, ಸಹಾಯಕ ನಿರ್ದೇಶಕ (ಗ್ರಾ.ಉ.) ಪಿ.ಎಸ್. ಕಸನಕ್ಕಿ, ಮೂಕಿಹಾಳ ಪಿಡಿಓ ಪಿ.ಎಸ್. ಗಾಣಗೇರ, ತಾಂತ್ರಿಕ ಸಂಯೋಜಕ ಮಹಾಂತೇಶ ಕಿಲಾರಟ್ಟಿ, ಐಇಸಿ ಸಂಯೋಜಕ ಮಲಕಪ್ಪ, ತಾಂತ್ರಿಕ ಸಹಾಯಕರಾದ ಮಹಾಂತೇಶ ಪಾಟೀಲ ಹಾಗೂ ಅನ್ನಾನ ಅಹಮ್ಮದ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ಎಂ. ಬಿರಾದಾರ, ಡಿಇಒ ಡಿ.ಎಸ್. ಹಿರೇಮಠ, ಕಾಯಕಮಿತ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್