Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹ

ಬೆಳಗಾವಿ: ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬೆಳಗಾವಿಯ ಪ್ರಮುಖ ದಲಿತ ಮುಖಂಡರು ಆಗ್ರಹಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ಜಂಟಿ ಪತ್ರಿಕಾಗೋಷ್ಠಿ ಮಾತನಾಡಿದ ದಲಿತ ಮುಖಂಡರು, ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ನಮ್ಮ ನಾಯಕರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸತೀಶ್ ಜಾರಕಿಹೊಳಿ ಅವರು ಕೇವಲ ಜಿಲ್ಲೆ ಅಥವಾ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ, ಅವರು ರಾಷ್ಟ್ರ ನಾಯಕರು. ನಮ್ಮ ಸಂಘಟನೆ ಮತ್ತು ದಲಿತ ಸಮಾಜದ ಬಗ್ಗೆ ಅವರಿಗೆ ಅಪಾರ ಗೌರವ ಹಾಗೂ ಹೆಮ್ಮೆಯಿದೆ ಎಂದು ಹೇಳಿದರು.
ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರು ಇತ್ತೀಚೆಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ದಲಿತ ಸಂಘಟನೆಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಅಲ್ಲದೇ ರಾಸಿಂಗೆ ಹಿಂದೆ ಹತ್ತು ಜನ ಬೆಂಬಲಿಗರೂ ಇಲ್ಲ. ಅವನಿಗೂ ಚಲುವಾದಿ ಸಮಾಜಕ್ಕೂ ಯಾವುದೇ ಸಂಬಂಧವಿಲ್ಲ. ಕಳೆದ 40 ವರ್ಷಗಳಲ್ಲಿ ಜಿಲ್ಲೆಯಲ್ಲಿ ಇಂತಹ ಕೀಳು ಮಟ್ಟದ ಘಟನೆಗಳು ನಡೆದಿಲ್ಲ. ಸತೀಶ್ ಅಣ್ಣಾ ಅವರು ನಮ್ಮನ್ನೆಲ್ಲ ಬಹಳಷ್ಟು ಪ್ರೀತಿಯಿಂದ ಬೆಳೆಸಿದ್ದಾರೆ. ಇಂತಹ ನಾಯಕರ ವಿರುದ್ಧವೇ ಪಿತೂರಿ ನಡೆಸುತ್ತಿರುವ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೋಹಿತೆ ಹಾಗೂ ಮಲ್ಲೇಶ ಚೌಗಲಾ ಮಾತನಾಡಿ,  ಸತೀಶ್ ಜಾರಕಿಹೊಳಿ ಅವರಷ್ಟೇ ಅಲ್ಲದೆ, ಹಿಂದಿನಿಂದಲೂ ಪ್ರಭಾವಿ ದಲಿತ ನಾಯಕರನ್ನು ತುಳಿಯುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಸಿಂಗೆ ಅವರ ಈ ಹೇಳಿಕೆಯ ಹಿಂದೆ ಯಾರ ಕೈವಾಡವಿದೆ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಯಾವ ನಾಯಕ ಎಲ್ಲಿಂದ ಬೆಳೆದು ಬಂದಿದ್ದಾರೋ, ಅಲ್ಲಿಂದಲೇ ಅವರನ್ನು ತುಳಿಯುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಹಿರಂಗ ಕ್ಷಮೆಯಾಚನೆಗೆ ಗಡುವು: ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರಿಂದ ಇಂತಹ ಬೇಜವಾಬ್ದಾರಿ ಮತ್ತು ಗೊಂದಲಕಾರಿ ಹೇಳಿಕೆಗಳನ್ನು ಸಮಾಜ ನಿರೀಕ್ಷಿಸಿರಲಿಲ್ಲ. ಮಲ್ಲಿಕಾರ್ಜುನ ರಾಸಿಂಗೆ ಅವರು ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಒಂದು ವೇಳೆ ಅವರು ತಮ್ಮ ನಿಲುವನ್ನು ಬದಲಿಸದಿದ್ದರೆ ಮುಂಬರುವ ದಿನಗಳಲ್ಲಿ ಜಿಲ್ಲಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಈ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನೀತಾ ಐಹೊಳೆ, ಕೆಂಪ್ಪಣ್ಣ ಸಿರಹಟ್ಟಿ, ಮಹಾದೇವ ತಳವಾರ, ಬಾಹುಸಾಬ ಪಾಂಡರೆ, ವಿಕ್ರಂ ಕರನಿಂಗ, ಸಂಜೀವ ಕಾಂಬಳೆ, ಶಾನುರ ತಹಶೀಲ್ದಾರ್ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸಿಟಿ ಸೈಕ್ಲಿಂಗ್ ಲೀಗ್ಯರಗಟ್ಟಿ: ಖಾಯಂ ನ್ಯಾಯಾಲಯಕ್ಕೆ ಚಾಲನೆ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ  ಆದೇಶ: ನೌಕರರ ಸಂಘದ ಹೋರಾಟಕ್ಕೆ ಸಂದ ಜಯ ಮಹೇಶ ಹುಬ್ಬಳ್ಳಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ಹನಮಂತ ಮಡಿವಾಳರ ಅವಿರೋಧ ಆಯ್ಕೆ*ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ ಮಾತು ಉಳಿಸಿಕೊಳ್ಳಿ:  ಮಹಾಂತೇಶ ಬಾಡಗಿ ಆಗ್ರಹಘಟಪ್ರಭಾ ರೇಲ್ವೆ  ಇಲಾಖೆ ಆಯ್  ಜಿ ತಿರಿಪಾಲ  ಮತ್ತು ಮಲ್ಲಿಕಾರ್ಜುನ ಇಂಗಳೆ  ಅವರಿಗೆ ಬೀಳ್ಕೊಡುಗೆ ಸಮಾರಂಭ.ಬಸ್ ನಿಲ್ದಾಣದಲ್ಲಿ ಯರ್ರಾ ಬಿರ್ರಿ ಖಾಸಗಿ ವಾಹನ ನಿಲುಗಡೆ : ಪ್ರಯಾಣಿಕರ ಪರದಾಟನಮ್ಮದು ಭಯೋತ್ಪಾದಕರಿಗೆ ಬಿರಿಯಾನಿಕೊಟ್ಟು ಸಲಹುವ ಸರ್ಕಾರವಲ್ಲ: ಸಿ.ಟಿ.ರವಿ.ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವದಲ್ಲಿ ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ