LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Gadag

ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘ ಅಧ್ಯಕ್ಷರಾಗಿ ದೇವಪ್ಪ ಲಿಂಗದಾಳ ಆಯ್ಕೆ


ಗದಗ: ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಗದಗ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ವೇರಿ ಗುಡ್ ಮಾರ್ನಿಂಗ್ ದಿನಪತ್ರಿಕೆ ಸಂಪಾದಕರಾದ ದೇವಪ್ಪ ಎನ್. ಲಿಂಗದಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ..
ಸಂಘದ ರಾಜ್ಯಾಧ್ಯಕ್ಷರಾದ ಶ. ಮಂಜುನಾಥ ಅವರ ನಿರ್ದೇಶನದ ಮೇರೆಗೆ ಸಂಘದ ರಾಜ್ಯ ಕಾರ್ಯದರ್ಶಿ ರಾಜು ಎಂ. ಹೆಬ್ಬಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪಾದಕರ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು..
ಖಜಾಂಚಿಯಾಗಿ ಚಕ್ರವರ್ತಿ ದಿನಪತ್ರಿಕೆ ಸಂಪಾದಕರಾದ ಎನ್.ಆರ್. ಭಾಂಡಗೆ, ಉಪಾಧ್ಯಕ್ಷರಾಗಿ ಗದಗ ಸಂಜೆ ದಿನಪತ್ರಿಕೆ ಸಂಪಾದಕರಾದ ರಮೇಶ ಭಜಂತ್ರಿ ಅವರು ಆಯ್ಕೆಯಾದರು..
ಆಯ್ಕೆ ಬಳಿಕ ಮೂವರೂ ಪದಾಧಿಕಾರಿಗಳಿಗೆ ಸನ್ಮಾನಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ರಾಜು ಎಂ. ಹೆಬ್ಬಳ್ಳಿ ಅವರು, ಈ ಸಂಘವು 1980 ರಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿದೆ.
ಹೀಗಾಗಿ ಈ ಸಂಘವು ಪ್ರತಿ ಜಿಲ್ಲೆಯ ಘಟಕ ರಚನೆ ಮಾಡುತ್ತಿದೆ..
ಇಡೀ ದೇಶದಲ್ಲಿಯೇ ಸರ್ಕಾರವೊಂದು ಗೆಜೆಟ್ ಮೂಲಕ ಮಾನ್ಯತೆ ಪಡೆದ ಏಕೈಕ ಸಂಘ ಇದಾಗಿದೆ ಎಂದು ಹೇಳಿದರು.
ನೂತನ ಅಧ್ಯಕ್ಷ ದೇವಪ್ಪ ಅವರು ಮಾತನಾಡಿ, ಸರ್ಕಾರ ಮತ್ತು ವಾರ್ತಾ ಇಲಾಖೆಯಲ್ಲಿ ಮಾನ್ಯತೆ ಹೊಂದಿರುವ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘಕ್ಕೆ ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸಂಪಾದಕರುಗಳಿಗೆ ಧನ್ಯವಾದಗಳು.
ಈ ಸಂಘವು ಯಾವುದೇ ಸಂಘಕ್ಕೆ ಪರ್ಯಾಯ ಅಲ್ಲ. ಆದರೆ, ಸಂಘಕ್ಕೆ ಯಾರೇ ಬಂದರೂ ಅವರಿಗೆ ಮುಕ್ತವಾಗಿ ಸ್ವಾಗತಿಸುತ್ತೇವೆ. ಪತ್ರಿಕೆಗಳ ಹಿತ ಕಾಪಾಡುವುದು ನಮ್ಮ ಮೂಲ ಉದ್ದೇಶ ಎಂದು ಹೇಳಿದರು.
ಸಭೆಯಲ್ಲಿ ನೂತನ ಖಜಾಂಚಿ ಎನ್.ಆರ್. ಭಾಂಡಗೆ, ಉಪಾಧ್ಯಕ್ಷ ರಮೇಶ ಭಜಂತ್ರಿ, ವಿಭಿನ್ನ ಬರಹ ದಿನಪತ್ರಿಕೆ ಸಂಪಾದಕರಾದ ಸಂತೋಷ ಕುರಿ ಸೇರಿ ಹಲವರಿದ್ದರು..

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್