Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಅಭಿವೃದ್ಧಿಯ ಜೊತೆಗೆ ಸಮಾಜಮುಖೀ ಕೆಲಸ: ಸತೀಶ್ ಜಾರಕಿಹೊಳಿ ಪ್ರಶಂಸೆ

ಸುಳೇಬಾವಿ (ಬೆಳಗಾವಿ): ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಅಭಿವೃದ್ಧಿ ಜತೆಗೆ ಸಮಾಜಮುಖಿ ಕೆಲಸಗಳನ್ನೂ ಮಾಡುತ್ತಿದ್ದಾರೆ ಎಂದು ಲೋಕೋಪಯೋಜಿ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ ಜಾರಕಿಹೊಳಿ ಪ್ರಸಂಸಿಸಿದರು.

 ಸುಳೇಭಾವಿ‌ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಂತ ಹಣದಿಂದ ಪ್ರತಿಷ್ಠಾಪಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯನ್ನು ಭಾನುವಾರ ಸಂಜೆ ಅನಾವರಣಗೊಳಿಸಿ ಅವರು ಮಾತನಾಡಿದರು.


ಇದೊಂದು ಐತಿಹಾಸಿಕ ದಿನ. ಇಲ್ಲಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ ಆಗಬೇಕೆಂದು ಬಹಳ ವರ್ಷದ ಕನಸಿತ್ತು. ಅದನ್ನು  ಹೆಬ್ಬಾಳಕರ ಮತ್ತು ಹಟ್ಟಿಹೊಳಿ ನೆರವೇರಿಸಿದ್ದಾರೆ. ಸರ್ಕಾರದ ಹಣದಲ್ಲಿ ಇಂತಹ ಮೂರ್ತಿ ಸ್ಥಾಪಿಸಲು ಅವಕಾಶ ಕಡಿಮೆ. ಆದರೆ ಹೆಬ್ಬಾಳಕರ ಅವರು ಸ್ವಂತ ಹಣದಿಂದ ನೆರವೇರಿಸಿದ್ದಾರೆ. ಅಭಿವೃದ್ಧಿ ಜೊತೆಗೆ ಸಮಾಜಮುಖಿ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು.


ನಮ್ಮ ಸರ್ಕಾರ ಜನಪರ ಕೆಲಸ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳು ಜನರ ಬದುಕು ಕಟ್ಟಲು ಸಹಕಾರಿಯಾಗಿವೆ. ಗೃಹಲಕ್ಷ್ಮೀ ಹಣವಂತೂ ಬಡವರ ಮಕ್ಕಳ ವಿದ್ಯಾಭ್ಯಾಸ, ವೈದ್ಯಕೀಯ ವೆಚ್ಚ ಸೇರಿದಂತೆ ಅನೇಕ ಕೆಲಸಗಳಿಗೆ ಸಹಕಾರಿಯಾಗಿದೆ.‌ ಬುದ್ಧ, ಬಸವಣ್ಣ, ಅಂಬೇಡ್ಕರ್ ನಮಗೆಲ್ಲರಿಗೂ ಆದರ್ಶ ಎಂದರು.



[video width="478" height="850" mp4="https://hasirukranti.in/wp-content/uploads/2025/05/VID-20250519-WA0109-1.mp4"][/video]



 ಛತ್ರಪತಿ ಶಿವಾಜಿ ಮಹಾರಾಜರ ತಂದೆ ಶಹಾಜಿ ಮಹಾರಾಜರ ಸಮಾಧಿ‌ ಇರುವ ಚನ್ನಗಿರಿ ತಾಲೂಕಿನ ಹೊದಗೆರೆ ಗ್ರಾಮದಲ್ಲಿ ಭವ್ಯ ಸ್ಮಾರಕ ಮಾಡಲು ಲೋಕೋಪಯೋಗಿ ಇಲಾಖೆಯಿಂದ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಸತೀಶ ಜಾರಕಿಹೊಳಿ‌ ತಿಳಿಸಿದರು.


ಸುಳೇಭಾವಿ ಗ್ರಾಮದಲ್ಲಿ ಯಾವುದೇ ಜಾತಿ, ಧರ್ಮ‌ದ ಭೇದ ಭಾವ ಇಲ್ಲದೇ ಇರುವುದು ಹೆಮ್ಮೆಯ ವಿಷಯ. ‌ ಶಿವಾಜಿ ಮಹಾರಾಜರ ಹೋರಾಟ, ಆದರ್ಶ ನಮಗೆಲ್ಲರಿಗೂ ಪ್ರೇರಣೆ. ಇಂಥ ಕಾರ್ಯಕ್ರಮಗಳು ನಮಗೆ ದಾರಿದೀಪ ಆಗಬೇಕು.  ಸುಂದರವಾದ ಸ್ಮಾರಕ‌ ನಿರ್ಮಾಣ ಮಾಡಿರುವುದು ಸಂತೋಷದ ವಿಷಯ. ಇಡೀ ಜಿಲ್ಲೆಯಲ್ಲೇ ಇಂತಹ ಸುಂದರ ಮೂರ್ತಿ ಬೇರೆಲ್ಲೂ ಇಲ್ಲ ಎಂದರು.

ಲಕ್ಷ್ಮೀ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಅವರು ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ