Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಮಂಜುನಾಥನ ವಿರುದ್ಧ ನಿರಂತರ ಷಡ್ಯಂತ್ರ : ಕ್ರಮಕೈಗೊಳ್ಳಲು ಭಕ್ತರ ಪ್ರತಿಭಟನೆ

 ಬಳ್ಳಾರಿ.ಆ.13 : ನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಮಂಜುನಾಥ ಸನ್ನಿಧಿಯ ಧರ್ಮಸ್ಥಳದ ವಿರುದ್ಧ ಯೂಟ್ಯೂಬರ್ ಮತ್ತು ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ಮತ್ತು ಸಮೀರ್ ಎಂ.ಡಿ ಇವರುಗಳು ನಿರಂತರವಾಗಿ ಯೂಟ್ಯೂಬ್ ಚಾನೆಲ್ಗಳ ಮೂಲಕ ಅಪಪ್ರಚಾರ ಮಾಡುತ್ತಾ ದೇವಸ್ಥಾನದ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತಿದ್ದಾರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಬಳ್ಳಾರಿ ನಗರದಲ್ಲಿ  ಸಾವಿರಾರು ಭಕ್ತರುಗಳು ಭಾರಿ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.


ಡಾ.ರಾಜ್ ಕುಮಾರ್ ರಸ್ತೆಯ ನಾರಾಯಣರಾವ್ ಪಾರ್ಕ್ ನಿಂದ ಪ್ರತಿಭಟನೆಯನ್ನು ನಡೆಸಿಕೊಂಡು  ಬಂದು ಭಕ್ತ ಸಮೂಹ ರಾಯಲ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಕ್ಷೇತ್ರ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ  ಸೋಮಶೇಖರ್ ರೆಡ್ಡಿ ಮಾತನಾಡಿ, ಧರ್ಮಸ್ಥಳವು ಹಿಂದು ದೇವಾಲಯಗಳಲ್ಲಿ ಒಂದು ಅತ್ಯಂತ ಪ್ರಮುಖವಾದ ದೇವಸ್ಥಾನವಾಗಿದೆ, ಮತ್ತು ರಾಜ್ಯ ಮತ್ತು ಹೊರರಾಜ್ಯದ ಸೇರಿ ದೇಶಾಧ್ಯಾಂತ ಕೋಟ್ಯಾಂತರ ಭಕ್ತರಿದ್ದಾರೆ. ಇಂತಹ ಪವಿತ್ರ ಕ್ಷೇತ್ರದ ಬಗ್ಗೆ ಯಾವುದೇ ದಾಖಲೆಗಳಿಲ್ಲದೆ ಸರಣಿ ಹತ್ಯೆಗಳನ್ನು ನಡೆಸಲಾಗಿದೆ ಎಂಬಂತ ಸುಳ್ಳು ಸುದ್ದಿಗಳನ್ನು ಹರಡಿಸಿ ಕ್ಷೇತ್ರದ ಬಗ್ಗೆ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ, ಒಂದು ವೇಳೆ ಅಂತಹ ಘಟನೆಗಳು ನಡೆದಿದೆ ಎಂದಾದಲ್ಲಿ ಕಾನೂನಿ ಪ್ರಕಾರ ತನಿಖೆಯನ್ನು ನಡೆಸಿ ಅಂತವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿ ಅದು ಬಿಟ್ಟು ಸುಖಾ ಸುಮ್ಮನೆ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಾ ಧರ್ಮಸ್ಥಳದ ವಿರುದ್ಧ ಕಳೆದ 13 ವರ್ಷಗಳಿಂದ ನಿರಂತರವಾಗಿ ಷಡ್ಯಂತ್ರ ರೂಪಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಸಮೀರ್ ಎಂ.ಡಿ ಇವರುಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅಗ್ರಹಿಸಿದರು.


ಮಾಜಿ ಶಾಸಕ  ಗಾಲಿ ಸೋಮಶೇಖರ ರೆಡ್ಡಿ  ಮಾತನಾಡಿ, ಅನಾಮಿಕ ವ್ಯಕ್ತಿಯೋರ್ವನು ನೀಡಿದ ದೂರಿನ ಮೇರೆಗೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು ನಡೆಸುತ್ತಿದೆ ಮತ್ತು ಅವನು ತೋರಿಸುತ್ತಿರುವ ಸಮಾದಿಗಳನ್ನು ಅಗೆಯಲಾಗುತ್ತಿದೆ, ಆ ವರದಿ ಬರುವ ಮುಂಚೆ ಇವರುಗಳು ಪ್ರಚೋಧನಾಕಾರಿ ಹೇಳಿಕೆಗಳನ್ನು ನೀಡುತ್ತಾ ಕ್ಷೇತ್ರದ ಧರ್ಮಕರ್ತರಾದ ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿದ್ದಾರೆ ಇವರ ಮೇಲೆ ಕೇಸ್ ದಾಖಲಿಸಿ ಇವರ ಆದಾಯದ ಮೂಲಗ ಬಗ್ಗೆ ತನಿಖೆಯನ್ನು ನಡೆಸಬೇಕು, ಮತ್ತು ಕ್ಷೇತ್ರದ ವಿರುದ್ಧ ಈ ರೀತಿಯ ಸುಳ್ಳು ಸುದ್ದಿಗಳನ್ನು ಸಮಾಜಿಕ ಜಾಲತಾಣದಲ್ಲಿ ಹರಡುತ್ತಿರುವವರ ವಿರುದ್ಧ ತಡೆನೀಡಿ ಸೂಕ್ತ ಕ್ರಮಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದುರು.


ಈ ಪ್ರತಿಭಟನೆಯಲ್ಲಿ   ಅನಿಲ್ ಕುಮಾರ್ ಮೋಕಾ , ಅಲ್ಲಂ ಪ್ರಶಾಂತ್, ವೀರಶೇಖರ್ ರೆಡ್ಡಿ, ಇಬ್ರಾಹೀಮ್ ಬಾಬು, ಗುಡಿಗಂಟಿ ಹನುಮಂತಪ್ಪ, ಮೊತ್ಕರ್ ಶ್ರೀನಿವಾಸ್,  ರೂಪಶ್ರೀ, ಪುಷ್ಪಾ, ವಿರೂಪಾಕ್ಷ, ವಿ ಮಹೇಶ್, ರೈತ ಸಂಘದ ಸಿಂಧಿಗೇರಿ ಗೋವಿಂದಪ್ಪ, ಸಂಗನಕಲ್ಲು ಕೃಷ್ಣ, ವಿ.ಎಚ್.ಪಿ ಪದಾಧಿಕಾರಿಗಳು, ಶ್ರೀರಾಮಸೇನೆ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನ ಶ್ರೀ ಕ್ಷೇತ್ರದ ಭಕ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ