Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆ



ಬೆಳಗಾವಿ: ತಾಲೂಕು ವ್ಯಾಪ್ತಿಯ   ಧಾಮಣೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ʻನಮ್ಮೂರು ನಮ್ಮ ಕೆರೆʼ ಕಾರ್ಯಕ್ರಮದ ಅನುದಾನದಲ್ಲಿ ಪುನಶ್ಚೇತನಗೊಳ್ಳಲಿರುವ ಮಾದರಿ ನಮ್ಮೂರು ನಮ್ಮ ಕೆರೆ ಹೂಳೆತ್ತುವ  ಗಣೇಶ ಕೆರೆಯ ಕಾಮಗಾರಿಗೆ  ಕೆರೆ ಸಮೀತಿ ಅಧ್ಯಕ್ಷರಾದ ಮಹಾದೇವ ಚೌಗಲೆ ಅವರು ಭೂಮಿ ಪೂಜೆ  ನೆರವೇರಿಸಿದರು.

ತಾಲೂಕು ಯೋಜನಾಧಿಕಾರಿಗಳು ಪಾರ್ವತಿ  ಅವರು ಮಾತನಾಡಿ,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ , ದೇವಸ್ಥಾನ ಜೀರ್ಣೋದ್ಧಾರ, ಸಮುದಾಯ ಭವನ ಕಟ್ಟಡಗಳಿಗೆ ಅನುದಾನ,  ಸರ್ಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚು ವಿತರಣೆ , ವೃತ್ತಿ ಪರ ಶಿಕ್ಷಣಕ್ಕೆ ವಿದ್ಯಾರ್ಥಿನಿಯರಿಗೆ  ಶಿಷ್ಯವೇತನ, ರುದ್ರಭೂಮಿ ಅನುದಾನ,  (ಚೇಂಬರ್)ಜನಮಂಗಲ ಕಾರ್ಯಕ್ರಮ , ನಿರ್ಗತಿಕರಿಗೆ ಮಾಶಾಸನ ವಿತರಣೆ , ಈ ರೀತಿಯಾಗಿ ಹಲವಾರು ಕಾರ್ಯಕ್ರಮಗಳ ಜೊತೆ   ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವು ಅತೀ ಪ್ರಮುಖವಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ   ರಾಜ್ಯದ ಅಭಿವೃದ್ದಿಗೆ  ಸಹಕಾರಿಯಾಗಿದೆ ಎಂದರು.

ರಾಜ್ಯದಾದ್ಯಂತ ಸುಮಾರು 1000 ಕೆರೆಗಳನ್ನು ಪುನಃಶ್ಚೇತನಗೊಳಿಸಿದ್ದಾರೆ.   ನಮ್ಮೂರು ನಮ್ಮ ಕೆರೆ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ.  ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಆಗಿದೆ, ಇದರಿಂದಾಗಿ ಸಮಾಜ ಸಂಕುಲಕ್ಕೆ ಒಳಿತು ಆಗಿರುತ್ತದೆ. ಜನನದಿಂದ ಮರಣದವರೆಗೂ ಎಲ್ಲಾ ಕಾರ್ಯಕ್ರಮಗಳಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಕ್ಕೆ ಒಳಿತು ಆಗುವಂತೆ ಕಾರ್ಯಕ್ರಮ ಅನುಷ್ಠಾನ ಮಾಡುತ್ತಾ ಬಂದಿದೆ. ಜೀವ ಜಲ ಉಳಿಸಿ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಹೇಳಿದರು.

ಧಾರವಾಡ ಪ್ರಾದೇಶಿಕ ವಿಭಾಗದ ಕೆರೆ ಅಭಿಯಂತರರು ನಿಂಗರಾಜ ಅವರು  ಮಾತನಾಡಿ, ಗಣೇಶ ಕೆರೆ ಹೂಳು ತೆಗೆಯಲು ಕೆರೆ ಸಮೀತಿ ಅವರು ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು.  ಕೆರೆಗೆ ತಂತಿ ಬೇಲಿ ಹಾಕಿಸಿ, ಮಾದರಿ ಕೆರೆಯನ್ನಾಗಿ ರಚನೆ ಮಾಡಿ, ಬಳಿಕ ಹಸ್ತಾಂತರ ಮಾಡಲಾಗುವುದು. ಬಳಿಕ,  ಕೆರೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ತಲಾಟಿ ಸಿದ್ದು, ಆನಂದ ಜಯಾನಾಚೆ,  ಊರಿನ ಪ್ರಮುಖರು, ಗ್ರಾಮಸ್ಥರು, ಕೆರೆ ಸಮೀತಿ ಸರ್ವ ಸದಸ್ಯರು, ಒಕ್ಕೂಟದವರು , ಸೇವಾಪ್ರತಿನಿಧಿ ರೇಖಾ , ವಿ ಎಲ್ ಈ ಪ್ರತೀಕ, ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ಮಹಾಂತೇಶ  ನಿರೂಪಿಸಿ ,  ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.ತಾಲೂಕು ಮಟ್ಟದ ಭೀಮೋತ್ಸವದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅಭಿಪ್ರಾಯಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನಆಂಧ್ರದ ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಮನವಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ತೊಡಕಗಳು ಅಡ್ಡಿಯಾಗದಿರಲಿ: ರೆಡ್ಡಿ ಶ್ರೀನಿವಾಸಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಲು ಶಾಸಕರ ಸೂಚನೆಎಚ್ ಕೆ ಪಾಟೀಲ ರ ಬೇಟಿ