LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮಸ್ಥಳ ಕೇಸ್‌: ತಿಮರೋಡಿ, ಮಟ್ಟಣ್ಣನವರ್‌ ಸೇರಿ ನಾಲ್ವರಿಗೆ ಎಸ್‌ಐಟಿ ನೋಟೀಸ್‌

ಮಂಗಳೂರು, ಅಕ್ಟೋಬರ್ 25: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಲಾಗಿದೆ.



ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ, ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಾಲ್ವರಿಗೆ ಎಸ್ಐಟಿ ನೀಡಿರುವ ನೋಟಿಸ್‌ನಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ ಕಲಂ 35(3) ಅಡಿಯಲ್ಲಿ , ದಿನಾಂಕ 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಕುರಿತಂತೆ ಸಂದರ್ಶನಕ್ಕಾಗಿ 27/10/2025 ರಂದು ಬೆಳಿಗ್ಗೆ 10.30ಕ್ಕೆ SIT ಕಛೇರಿಗೆ ಹಾಜರಾಗಲು ಸೂಚಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ