Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀ‌ರ್ ಅಹಮ್ಮದ್ ಅವರಿಗೆ ಸಚಿವ ಸ್ಥಾನ ನೀಡಲು ಧಾರವಾಡ ಅಂಜುಮನ್ ಸಂಸ್ಥೆಯಿಂದ ಆಗ್ರಹ.

ಧಾರವಾಡ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಸರ್ಕಾರದಲ್ಲಿ ಜಮೀ‌ರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಉಪಾಧ್ಯಕ್ಷ ಬಸೀ‌ರ್ ಅಹ್ಮದ್ ಜಾಹಗೀರದಾ‌ರ್ ಆಗ್ರಹಿಸಿದರು.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ನಾಯಕ ಜಮೀರ್ ಅಹಮ್ಮದ್ ಖಾನ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಅವರನ್ನು ಸಚಿವ ಸಂಪುಟದಿಂದ ದೂರ ಇಟ್ಟಿರುವ ಕ್ರಮ ಖಂಡನೀಯ. ಮುಸ್ಲಿಂ ಸಮುದಾಯದ ಪರವಾಗಿ ಉತ್ತಮ ಕೆಲಸಗಳನ್ನು ಜಮೀರ್ ಅಹಮ್ಮದ್ ಖಾನ್ ಮಾಡಿದ್ದಾರೆ. ಸಚಿವರಾಗಿ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಆದರೂ ಜಮೀ‌ರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವುದು, ಮುಸ್ಲಿಂ ಸಮುದಾಯದ ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು. ಜಮೀ‌ರ್ ಅಹಮ್ಮದ್ ಖಾನ್ ಸೇರಿದಂತೆ ಐದು ಜನ ಹಿರಿಯ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಅವರು ಮಾತನಾಡಿ ಮುಸ್ಲಿಂ ಸಮುದಾಯ, ದಲಿತ ಸಮುದಾಯ, ಓಬಿಸಿ ಸಮುದಾಯಗಳು ಕಾಂಗ್ರೆಸ್‌ನ ವೋಟ್ ಬ್ಯಾಂಕ್. ಹೀಗಾಗಿ ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಸಿಎಂ ಪ್ರಮಾಣ ವಚನ ಸಂದರ್ಭದಲ್ಲೇ ಇನ್ನೊಬ್ಬ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಮುಸ್ಲಿಂ ಸಮುದಾಯದ ಜನ ವ್ಯಕ್ತಿಗೆ ಮತ ಹಾಕುವುದಿಲ್ಲ. ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತಾರೆ. ಹೀಗಾಗಿ ನಮ್ಮ ಪಕ್ಷ ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಜಮೀ‌ರ್ ಅಹ್ಮದ್ ಅವರಿಗೆ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ಸಿಗಬೇಕಿತ್ತು. ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಮುಸ್ಲಿಂ ಮತಗಳು ಮುಖ್ಯವಾಗಿವೆ. ಜಮೀ‌ರ್ ಅವರಿಗೆ ಸಚಿವ ಸ್ಥಾನ ಕೊಡದೇ ಇರುವುದು ಅವರಿಗೆ ಮಾಡಿದ ಅಪಮಾನ. ಕಾಂಗ್ರೆಸ್ ಒಳ್ಳೆಯ ಪಕ್ಷ. ಉಳಿದವರಿಗೆ ಸಚಿವ ಸ್ಥಾನ ಕೊಟ್ಟಂತೆ ಮುಸ್ಲಿಂ ಸಮುದಾಯಕ್ಕೂ ಕೊಡಬೇಕಿತ್ತು. ಜಮೀ‌ರ್ ಜನರಿಗೆ ಬೇಕಾದವರು. ಅವರನ್ನು ಷಡ್ಯಂತ್ರದಿಂದ ಬಚಾವ್‌ ಮಾಡಬೇಕಿದೆ. ನಾನು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತೇನೆ, ಜಮೀರ್ ಹಲವು ಅಂಜುಮನ್‌ ಸಂಸ್ಥೆಗಳಿಗೆ ಸಹಾಯ ಮಾಡಿದ್ದಾರೆ. ಅವರು ರಾಜ್ಯದ ದೊಡ್ಡ ನಾಯಕರಿದ್ದಾರೆ.ಅವರಿಗೆ ಸಚಿವ ಸ್ಥಾನ ನೀಡಿ ಎಂದು ಆಗ್ರಹಿಸಿದರು
 ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ. ಬಶೀರ ಅಹ್ಮದ ಜಹಾಗೀರದಾರ. ಕಾರ್ಯದರ್ಶಿಗಳಾದ ಡಾ. ಎಸ್. ಎಸ್. ಸರಗಿರೋ ಖಜಾಂಚಿ ಶ್ರೀ, ರಪೀಕ ಅಹ್ಮದ ಶಿರಹಟ್ಟಿ, ಸಂಸ್ಥೆಯ ಮಾಜಿ ಕಾರ್ಯದರ್ಶಿ ಮತ್ತು ಶ್ರೀ. ನಜೀರ ಮನಿಯಾರ, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರಾದ ಶ್ರೀ. ದೀಪಕ ಚಿಂಚೊರೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾದ ಮೆಹಬೂಬಖಾನ ಪಠಾಣ, ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ