Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ ಡಿಎಚ್ ಒ ಡಾ. ಸಂಪತ್ತಕುಮಾರ ಗುಣಾರಿ ಅಭಿಮತ

ವಿಜಯಪುರ,ಜು.೧೪: ತಾಯಿ ಮರಣ ಪ್ರಮಾಣ ಮತ್ತು ತೊಂದರೆ ತಡೆಗಟ್ಟುವುದು  ವಿಶ್ವ ಜನಸಂಖ್ಯೆ  ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಸಂಪತ್ತ ಗುಣಾರಿ, ಹೇಳಿದರು. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ನಸಿಂಗ್ ಕಾಲೇಜಿನ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಆರೋಗ್ಯಕರ ಅಂತರ ಕಾಪಾಡುವವರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವದರೊಂದಿಗೆ ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟಬಹುದಾಗಿದೆ ಎಂದ ಅವರು, ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯದ ಗುಣಮಟ್ಟ ಸುಧಾರಣೆ ಗರ್ಭಧಾರಣೆಗೆ ಆರೋಗ್ಯಕರ ಸಮಯ ಮತ್ತು ಗರ್ಭಧಾರಣೆಗಳ ನಡುವಿನ ಅಂತರವನ್ನು ಉತ್ತೇಜಿಸಬೇಕಿದೆ ಎಂದರು.
ಭಾರತ ಸ್ವಾತಂತ್ರ್ಯ ಪಡೆದುಕೊಂಡಾಗ ದೇಶದ ಜನಸಂಖ್ಯೆ ಕೇವಲ ೩೩ ಕೋಟಿ ಇತ್ತು. ಕಳೆದ ೭೯ ವರ್ಷಗಳಲ್ಲಿ ಜನಸಂಖ್ಯೆಯ ವಿಷಯದಲ್ಲಿ ಹಲವು ಮಹತ್ವದ ಬದಲಾವಣೆ ಮಾಡಲಾಗಿದೆ. ಪ್ರಸ್ತುತ ಭಾರತ ಜನಸಂಖ್ಯೆ ೧೪೪ ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿದೆ. ಆದ್ದರಿಂದ ವಿಶ್ವದಲ್ಲಿ ಅತ್ಯಧಿಕ ಜನಸಂಖ್ಯೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ. ಆದರೆ ಇತ್ತಿಚಿನ ವರ್ಷಗಳಲ್ಲಿ ಭಾರತ ದೇಶದ ಜನನ ದರ ೧.೯೪ ಕ್ಕೆ ಕುಸಿದಿದೆ. ಇದು ಭವಿಷ್ಯದಲ್ಲಿ ಜನಸಂಖ್ಯೆಯ ಆಸಮತೋಲನಕ್ಕೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ವೃದ್ಧರ ಸಂಖ್ಯೆ ಹೆಚ್ಚಳಗೊಂಡು ದುಡಿಯುವ ಕೈಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಇದು ಮುಖ್ಯವಾಗಿ ದೇಶಕ್ಕೆ ಆರ್ಥಿಕ ದೃಷ್ಟಿಯಿಂದ ಅಪಾಯವಾಗುತ್ತದೆ ಎಂದರು. ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಕುಟುಂಬ ಕಲ್ಯಾಣ ಕಾರ್ಯಕ್ರಮಗಳಾದ ಶಾಶ್ವತ ಹಾಗೂ ತಾತ್ಕಾಲಿಕ ವಿಧಾನಗಳನ್ನು ಮಹಿಳೆಯರಿಗೆ ಹಾಗೂ ಪುರುಷರಿಗೆ ಜಿಲ್ಲೆಯ ಎಲ್ಲ ತಾಲೂಕಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪಿಪಿಆಯುಸಿಡಿ  ಅಂತರ ಚುಚ್ಚುಮದ್ದು, ಇಂಪ್ಲಾಂಟ ರಾಡ್ ಅಳವಡಿಕೆ, ಪುರುಷರಿಗೆ ನಿರೋಧ, ಶಾಶ್ವತ ವಿಧಾನಗಳಾದ ಮಹಿಳೆಯರಿಗೆ ಟ್ಯುಬೆಕ್ಟಮಿ, ಉದರದರ್ಶಕ ಶಸ್ತ್ರಚಿಕಿತ್ಸೆ ಪುರುಷರಿಗೆ, ಪುರುಷ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದರು. ಅರವಳಿಕೆ ತಜ್ಞರಾದ ಡಾ. ಸಜ್ಜನ ಮಾತನಾಡಿ, ದೇಶದ ಜನಸಂಖ್ಯೆಯು ೧೪೪ ಕೋಟಿಗೂ ಹೆಚ್ಚಾಗಿ ಅದರಲ್ಲಿ ನಮ್ಮ ದೇಶದಲ್ಲಿ ಯುವಕರೇ ಹೆಚ್ಚಿನ ಪ್ರಮಾಣದಲ್ಲಿದೆ. ಅದರಿಂದ ನಗರೀಕರಣ ನಿರುದ್ಯೋಗ ಮತ್ತು ಪರಿಸರ ಮಾಲಿನ್ಯದಂಥಹ ದೊಡ್ಡ ಸವಾಲುಗಳು ಈಗ ಎದುರಾಗಿವೆ. ಜನಸಂಖ್ಯೆಯು ಈಗ ಕೇವಲ ನಿಯಂತ್ರಣದ ವಿಷಯವಾಗಿರದೇ ನಿರ್ವಹಣೆಯ ವಿಷಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ  ಡಾ. ಎಂ.ಬಿ.ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಡಿ ಗುಂಡಬಾವಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಸುರೇಂದ್ರ ಮಾನಕರ, ಶಂಕರ ಚಲವಾದಿ, ರೇಖಾ ದಶವಂತ, ಮೋತಿಲಾಲ ಲಮಾಣಿ, ಎನ್.ಆರ್. ಬಾಗವಾನ, ನಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ಮಲೇರಿಯಾ ಅಧಿಕಾರಿ ವಿರುಪಾಕ್ಷ ಬಂದಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ