Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ಹಂಗಾಮಿನಲ್ಲಿ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ: ಸಲೀಂ ಸಂಗತ್ರಾಸ

ಯರಗಟ್ಟಿ: ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ತಾಲೂಕಿನಲ್ಲಿ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಸಲೀಂ ಸಂಗತ್ರಾಸ, ತಿಳಿಸಿದ್ದಾರೆ.

ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ ಕಡಲೆ, ಜೋಳ, ಗೋಧಿ, ಸೂರ್ಯಕಾಂತಿ ಹಾಗೂ ಕುಸುಬೆ ಬಿತ್ತನೆ ಬೀಜ ಈಗಾಗಲೇ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ತಾಲೂಕಿನಲ್ಲಿ ೨೦೨೫-೨೬ ನೇ ಸಾಲಿನ ಹಿಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯವನ್ನು ಸದರಿ ಹಂಗಾಮಿನಲ್ಲಿ ಲಭೈವಿರುವ ದಾಸ್ತಾನು ಬಗ್ಗೆ ಮಾಹಿತಿ ನೀಡುತ್ತಾ ಹೋಬಳಿಯ ಉಪ ಮಾರಾಟ ಕೇಂದ್ರದಲ್ಲಿ ಈಗಾಗಲೇ ಕಡಲೆ ೬೯೭ ಕ್ವಿ ಬೇಡಿಕೆ ಪೈಕಿ ೩೭೦ ಕ್ವಿ ಹಾಗೂ ಜೋಳ ೫೪ ಕ್ವಿ ಪೈಕಿ ೩೦ ಕ್ವಿ ದಾಸ್ತಾನು ಇದ್ದು ಮುಂದಿನ ದಿನಗಳಲ್ಲಿ ಸೂರ್ಯ್ರಕಾಂತಿ, ಗೋಧಿ ಹಾಗೂ ಮುಸುಕಿನ ಜೋಳ ಬೀಜ ದಾಸ್ತಾನು ಹಾಗೂ ವಿತರಣೆ ಮಾಡಲಾಗುವುದು.

ಕಡಲೆ ಪ್ರತಿ ೨೦ ಕೆ.ಜಿ ಪಾಕೆಟ್ ದರವು ರೂ.೧೧೬೦/- ಜೋಳ ಪ್ರತಿ ೩ ಕೆ.ಜಿ ಪಾಕೆಟ್ ದರವು ರೂ.೧೨೦/- ಹಾಗೂ ಗೋಧಿ ಪ್ರತಿ ೩೦ ಕೆ.ಜಿ ಪಾಕೆಟ್ ದರವು ರೂ.೧೮೩೦/- ಇದ್ದು ಯಾವುದೇ ದಾಸ್ತಾನು ಕೊರತೆ ಇರುವುದಿಲ್ಲ. ರೈತರು ಸಂಬಂದಿಸಿದ ಉಪ ಕೇಂದ್ರಕ್ಕೆ ಭೇಟಿ ನೀಡಿ ಬೀತ್ತನೆ ಬೀಜ ಪಡೆಯಲು ಸಾಹಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ತಿಳಿಸಿದರು.

ಈ ವೇಳೆ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಯರಗಟ್ಟಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಎಂ. ಜಿ. ಕಳಸಪ್ಪನವರ, ಆತ್ಮ ಸಿಬ್ಬಂದಿ ಉಮೇಶ ಯರಗಟ್ಟಿ, ಕೃಷಿ ಸಂಜೀವಿನಿ ಸಿಬ್ಬಂದಿಗಳಾದ ಶ್ರವಣ ಶಿವಪೂಜಿ ,ಮಂಜು ಮುಂಡೆಶಿ ,ಬಸಪ್ಪ ದಳವಾಯಿ, ತುಕಾರಾಂ ಕಮತಗಿ, ಹಣಮಂತ ತಳವಾರ ರೈತರಾದ ಶಿವಾನಂದ ನಾಯಕಪ್ಪ, ಶಿ ಗೋಳ, ಸೋಮು ರೈನಾಪುರ, ಶಿವಾನಂದ ಕರಿಗೊನ್ನವರ, ಬಸವರಾಜ್ ಚಿಕಾಕಿ ಮತ್ತು ಧರ್ಮೇಶ್ ಚಿಕಾಕಿ ಹಾಜರಿದ್ದರು

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ