Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದಿಂಗಾಲೇಶ್ವರ‌ ಸ್ವಾಮೀಜಿ

ಧಾರವಾಡ,ಏಪ್ರಿಲ್ 18: ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಪ್ರಹ್ಲಾದ್​​ ಜೋಶಿ ಪ್ರತಿನಿಧಿಸುವ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಇಂದು ಸಲ್ಲಿಸಿದ್ದಾರೆ. ಯಾವುದೇ ಮೆರವಣಿಗೆ ‌ಇಲ್ಲದೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸ್ವಾಮೀಜಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.


ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವಾಮೀಜಿಯಿಂದ ನಗರದ ಟೌನ್​ ಹಾಲ್​ನಿಂದ ಮೆರವಣಿಗೆ ನಡೆಯಬೇಕಿತ್ತು. ಆದರೆ, ಮರೆವಣಿಗೆ ಮಾಡದೆ ಮೊದಲು ಸಾಂಕೇತಿಕವಾಗಿ ಒಂದು ಸೆಟ್ ನಾಮಪತ್ರವನ್ನು ಅವರು ಸಲ್ಲಿಸಿದರು. ಬಳಿಕ ಮೆರವಣಿಗೆ ಮೂಲಕ‌ ಮತ್ತೊಮ್ಮೆ ಚುನಾವಣಾಧಿಕಾರಿಗಳ ಕಚೇರಿಗೆ ಬರಲಿದ್ದಾರೆ. ಈ ವೇಳೆ, ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಮೆರವಣಿಗೆ ಮಾಡಿ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಬಳಿಕ ಮಾಧ್ಯಮಗಳಿಗೆ ಹೆಚ್ಚಿನದನ್ನು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ಹೇಳಿ ತೆರಳಿದರು.


ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಇತ್ತು. ಇದೀಗ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ತ್ರಿಕೋನ ಸ್ಪರ್ಧೆಯ ಸ್ಥಿತಿ ನಿರ್ಮಾಣವಾಗಿದೆ. ಹಾಲಿ ಸಂಸದರಾದ ಪ್ರಹ್ಲಾದ್​​ ಜೋಶಿ ವಿರುದ್ಧ ನೇರವಾಗಿಯೇ ವಾಗ್ದಾಳಿ ನಡೆಸುತ್ತಿರುವ ಸ್ವಾಮೀಜಿ, ''ಎಲ್ಲ ವರ್ಗದ ಜನರು ಈಗಿನ ಸಂಸದರಿಂದ ಸಂಕಷ್ಟ ಅನುಭವಿಸಿದ್ದಾರೆ. ಅವರು ನನ್ನ ಬಳಿ ಬಂದು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ನಾಡಿನ ಜಿಲ್ಲೆಯ ಜನರ ಹಿತದೃಷ್ಟಿಯಿಂದ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ'' ಎಂದು ಈ ಹಿಂದೆ ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್​ ಪಕ್ಷದಿಂದ ವಿನೋದ್​ ಅಸೂಟಿ ಚುನಾವಣಾ ಕಣದಲ್ಲಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*