LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಿರ್ದೇಶಕ ಆರ್ ರವೀಂದ್ರ ಸಾರಥ್ಯದಲ್ಲಿ  ಗೋಪಿಲೋಲನಾಗಿ ಮಂಜುನಾಥ್ ಅರಸು

     ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾ ನಿರ್ದೇಶಿಸಿರುವ ಆರ್ ರವೀಂದ್ರ ಸದ್ದಿಲ್ಲದೇ ಹೊಸ ಸಿನಿಮಾ ಮುಗಿಸಿದ್ದಾರೆ. ಈ ಚಿತ್ರದ ಟೈಟಲ್ ರಿಲೀಸ್ ಆಗಿದೆ. ರವೀಂದ್ರ ಅವರ ಹೊಸ ಪ್ರಯತ್ನಕ್ಕೆ 'ಗೋಪಿಲೋಲ' ಎಂಬ ಹೆಸರಿಡಲಾಗಿದೆ.


     ಈ ಸಿನಿಮಾದಲ್ಲಿ ಯುವ ಪ್ರತಿಭೆ ಮಂಜುನಾಥ್ ಅರಸು ನಾಯಕನಾಗಿ ನಟಿಸಿದ್ದು, ನಿಮಿಷಾ ಕೆ ಚಂದ್ರ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಉಳಿದಂತೆ ಆಂಕರ್ ಕಂ ನಟಿ ಜಾಹ್ನವಿ, ಎಸ್ ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ನಿರ್ದೇಶಕ ಜೋಸೈಮನ್ ಸೇರಿದಂತ ತಾರಬಳಗವಿದ್ದು, ತೆಲುಗು ನಟ ಸಪ್ತಗಿರಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಎಂಟ್ರಿ ಕೊಡುತ್ತಿದ್ದಾರೆ.


     ಛಲಗಾರ, ನೀವು ಕರೆ ಮಾಡಿದ ಚಂದದಾರರು, ರಾಂಧವ ಸಿನಿಮಾ ನಿರ್ಮಿಸಿದ್ದ ಎಸ್ ಆರ್ ಸನತ್ ಕುಮಾರ್ ಚಿತ್ರಕ್ಕೆ ಹಣ ಹಾಕಿದ್ದಾರೆ. ನಾಯಕನಾಗಿರುವ ಮಂಜುನಾಥ್ 'ಗೋಪಿಲೋಲ' ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿಯೂ ಜೊತೆಯಾಗಿದ್ದಾರೆ. ಸಹಜ ಕೃಷಿ ಜೊತೆಗೆ ಪ್ರೇಮಕಥೆ ಎಳೆಯನ್ನು ಹೊಂದಿರುವ ಈ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, . ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.


    ಗೋಪಿಲೋಲ ಸಿನಿಮಾಗೆ ಜಯಂತ್ ಕಾಯ್ಕಿಣಿ, ಕವಿರಾಜ್, ಕೇಶವಚಂದ್ರ ಸಾಹಿತ್ಯ ಬರೆದಿದ್ದು, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್, ಹೇಮಂತ್, ಅನುರಾಧಾ ಭಟ್, ವಾರಿಜ ಶ್ರೀ, ಶಶಾಂಕ್ ಹಾಗೂ ಗೀತಾ ಭಟ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದಾಚಾರ್ಯ, ಧನಂಜಯ್ ಹಾಗೂ ಹರಿಕೃಷ್ಣ ನೃತ್ಯ ಸಂಯೋಜನೆ ಹಾಡುಗಳಿಗಿದೆ.


     ಗೋವಾ,ಕೊಡಚಾದ್ರಿ, ಹೊನ್ನಾವರ, ಮಂಗಳೂರು, ಮುರುಡೇಶ್ವರ, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಶೂಟಿಂಗ್ ಮುಗಿಸಿರುವ 'ಗೋಪಿಲೋಲ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಟೀಸರ್, ಹಾಡುಗಳನ್ನು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್