Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುದಾನಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಕಂಪ್ಯೂಟರ್ ವಿತರಣೆ








ರಾಯಬಾಗ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯ ಸೌಲಭ್ಯ ಮರು ಜಾರಿಗೊಳಿಸಲು ಮೇಲ್ಮನೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸುವುದಾಗಿ ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ ಹೇಳಿದರು.
ಸೋಮವಾರ ಪಟ್ಟಣದ ಶಾಸಕರ ಗೃಹ ಕಚೇರಿ ಸಭಾಂಗಣದಲ್ಲಿ ಶಾಸಕರ (ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ) ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರಾಯಬಾಗ ಮತ್ತು ಚಿಕ್ಕೋಡಿ ತಾಲೂಕಿನ ಅನುದಾನಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಕಂಪ್ಯೂಟರ್, ಸ್ಕ್ಯಾನರ್ ಮತ್ತು ಪ್ರಿಂಟರ್ ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದರಿಂದ ಸರ್ಕಾರ ಹೇಳುವ ಶೇ.100 ಪರೀಕ್ಷೆ ಫಲಿತಾಂಶ ಪಡೆಯಲು ಶಿಕ್ಷಕರಿಗೆ ಅಸಾಧ್ಯವಾಗಿದೆ. ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ ಆದರೆ ಮಾತ್ರ ಶಿಕ್ಷಣ ಕ್ಷೇತ್ರ ಸುಧಾರಿಸಲು ಸಾಧ್ಯ ಎಂದರು. ಶಿಕ್ಷಕರ ಎಲ್ಲ ಬೇಡಿಕೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ, ತಮ್ಮ ಎಲ್ಲ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಡಿ.ಎಮ್.ಐಹೊಳೆ ಅವರು ಮಾತನಾಡಿ, ಶಿಕ್ಷಕರ ಎಲ್ಲ ಬೇಡಿಕೆ ಮತ್ತು ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಸರ್ಕಾರದಿಂದ ಶೈಕ್ಷಣಿಕ ಕ್ಷೇತ್ರಕ್ಕೆ ದೊರೆಯುವ ಎಲ್ಲ ಸೌಲಭ್ಯಗಳು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಜಿನೇಂದ್ರ ನಿಲಜಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಚಿಕ್ಕೋಡಿ ಡಿಡಿಪಿಐ ಆರ್.ಸೀತಾರಾಮ ಮಾತನಾಡಿದರು.

ಬಿಇಒ ಬಸವರಾಜಪ್ಪ ಆರ್, ಎಲ್.ಬಿ.ಚೌಗುಲೆ, ಪೃಥ್ವಿರಾಜ ಜಾಧವ, ಎಸ್.ಎಸ್. ಮಠದ, ರಾಮು ಹೂಗಾರ, ವಿ.ಎಸ್.ಪೂಜಾರಿ, ಬಸವರಾಜ ಯಲಶೆಟ್ಟಿ, ಬಸವರಾಜ ಕಾಂಬಳೆ, ಸದಾನಂದ ಹಳಿಂಗಳಿ, ಅಣ್ಣಾಸಾಹೇಬ ಖೆಮಲಾಪೂರೆ, ಸುರೇಶ ಮಾಳಿ, ಜಿಯಾವುಲ್ಲ ಮುಲ್ಲಾ, ಕರೇಪ್ಪ ನಾಯಿಕ ಹಾಗೂ ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ಕಾಲೇಜ ಪ್ರಾಚಾರ್ಯರು ಇದ್ದರು.

ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಶಾಸಕರ ಗೃಹ ಕಚೇರಿ ಸಭಾಂಗಣದಲ್ಲಿ ರಾಯಬಾಗ ಮತ್ತು ಚಿಕ್ಕೋಡಿ ತಾಲೂಕಿನ ಅನುದಾನಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಕಂಪ್ಯೂಟರ್, ಸ್ಕ್ಯಾನರ್ ಮತ್ತು ಪ್ರಿಂಟರ್ ಗಳನ್ನು ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ ಹಾಗೂ ಶಾಸಕ ಡಿ.ಎಮ್.ಐಹೊಳೆ ವಿತರಿಸಿದರು. ಆರ್.ಸೀತಾರಾಮ, ಬಸವರಾಜಪ್ಪ ಆರ್, ಜಿನೇಂದ್ರ ನಿಲಜಗಿ ಇತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ