Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾಗಾಂಧಿಯವರ ಜನ್ಮದಿನದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಮೂಡಲಗಿ: ಇಂದಿರಾ ಗಾಂಧಿಯವರು ದೇಶದ ಪ್ರಥಮ ಮಹಿಳಾ ಪ್ರಧಾನಿಯಾಗಿ ಕ್ಷೀರ ಕ್ರಾಂತಿ, ಹಸಿರುಕ್ರಾಂತಿ, ಭೂ ಒಡೆಯದಂತಹ ಕ್ರಾಂತಿಕಾರಿ ಖಾಯ್ದೆಗಳನ್ನು ಜಾರಿಗೆ ತಂದು, ದೇಶದ ಜನತೆಯ ಮನೆ ಮನಗಳಲ್ಲಿ ಅಜರಾಮರವಾಗಿ ಉಳಿದಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೇ ಸುಜಾತಾ ಹಿರೇಮಠ ಹೇಳಿದರು.



ಮಂಗಳವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಇಂದಿರಾಗಾಂಧಿಯವರ ಜನ್ಮದಿನದ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು ಇಂದಿರಾಗಾಂಧಿಯವರು ದೇಶ ಕಂಡ ಅಪ್ರತಿಮ ಪ್ರಧಾನಿಯಾಗಿ ಬಡ ಜನರ ನಾಡಿ ಮಿಡಿತ ಚೆನ್ನಾಗಿ ಅರಿತು, ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಶ್ಲಾಘಿಸಿದರು.



ಕಾಂಗ್ರೆಸ್ ಮುಖಂಡ ಇಜಾಜ್ ಅಹ್ಮದ್ ಕೊಟ್ಟಲಗಿ ಮಾತನಾಡಿ ಉಕ್ಕಿನ ಮಹಿಳೆಯೆಂದೇ ಖ್ಯಾತರಾಗಿದ್ದ ಇಂದಿರಾಗಾಂಧಿಯವರು, ಅನೇಕ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದಲ್ಲದೇ, ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ದೇಶದಲ್ಲಿ ಕಾರ್ಖಾನೆಗಳು, ರಸ್ತೆ ಗಳಂತಹ ಜನಪರ ಕಾರ್ಯಗಳನ್ನು ಮಾಡುತ್ತ, ದೇಶ ಕಂಡ ನೆಚ್ಚಿನ ಪ್ರಧಾನಿಗಳಾಗಿ ಮನೆ ಮಾತಾಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಇಂದಿರಾಗಾಂಧಿಯವರ ಜನ್ಮದಿನದ ಪ್ರಯುಕ್ತ ಆಶಾಕಾರ್ಯಕರ್ತೆಯರಿಗೆ, ಪೌರ ಕಾರ್ಮಿಕರಿಗೆ, ಬಡ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಪತ್ರಿಕಾ ವಿತರರಿಗೆ ಪೆನ್,ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.



ಈ ಸಂದರ್ಭದಲ್ಲಿ ಕಾಂಗ್ರೇಸ್ ಅರಭಾವಿ ಮಂಡಲದ ಅಧ್ಯಕ್ಷ ಸುರೇಶ್ ಮಗದುಮ್, ಕಾಂಗ್ರೆಸ್ ಅಲ್ಪಸಂಖ್ಯಾತರ ಕಾರ್ಯಾಧ್ಯಕ್ಷ ರಫೀಕ್ ಪೈಲ್ವಾನ್, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ, ತಹಸೀಲ್ದಾರ್ ಕಚೇರಿಯಿಂದ ವಾಯ್.ಎಮ್.ಉದ್ದಪ್ಪನವರ್, ಪುರಸಭೆಯಿಂದ ಲಲಿತಾ ಜಾಧವ, ಕಾಂಗ್ರೆಸ್ ಅರಭಾವಿ ಘಟಕದ ಅಲ್ಪಸಂಖ್ಯಾತರ ಉಪಾಧ್ಯಕ್ಷೆ ಕೌಸರ್ ತಹಶೀಲ್ದಾರ್, ಕಾಂಗ್ರೆಸ್ ಕೌಜಲಗಿ ಘಟಕದ ಅಲ್ಪಸಂಖ್ಯಾತರ ಉಪಾಧ್ಯಕ್ಷೆ ದಿಲ್ ಶಾದ ಹವಾಲ್ದಾರ್, ಕಾಂಗ್ರೆಸ್ ಮಹಿಳಾ ಸದಸ್ಯರಾದ ರೇಶ್ಮಾ ಕಡಬಿಶಿವಾಪೂರ್, ಶ್ರೀಧರ್ ಹಿರೇಮಠ್, ದಾವಲ್ ಡಾಂಗೆ, ಸೋಹೆಲ್ ಮುಲ್ಲಾ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ