Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಣಂತಿಯರಿಗೆ ಆರೋಗ್ಯ ಕಿಟ್‌ ವಿತರಣೆ

ಘಟಪ್ರಭಾ: ಬಾಣಂತಿಯರ ಆರೋಗ್ಯ ಹಾಗೂ ನವಜಾತ ಶಿಶುಗಳ ಸುರಕ್ಷತೆ ನಮ್ಮ ಸಂಸ್ಥೆಯ ಪ್ರಮುಖ ಆದ್ಯತೆಯಾಗಿದ್ದು, ಈ ಕಿಟ್‌ಗಳು ತಾಯಂದಿರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ಶಿಶುಗಳ ಸಮರ್ಪಕ ಆರೈಕೆಗೆ ಸಹಕಾರಿಯಾಗಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಿ.ಕೆ.ಎಚ್. ಪಾಟೀಲ ಹೇಳಿದರು.
ಅವರು ಮಂಗಳವಾರ ರಂದು ಸ್ಥಳೀಯ ಶ್ರೀ ಜೆ. ಜಿ. ಸಹಕಾರಿ ಆಸ್ಪತ್ರೆ ಸೊಸಾಯಿಟಿ ನಿಯಮಿತ, ಘಟಪ್ರಭಾ ವತಿಯಿಂದ ಅಮೃತ ಮಹೋತ್ಸವ ಪರ್ವ ೨೦೨೬ ರ ಅಂಗವಾಗಿ ಸ್ತ್ರೀರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಆಶ್ರಯದಲ್ಲಿ ೭೫ ಬಾಣಂತಿಯರಿಗೆ ಅಗತ್ಯ ವಸ್ತುಗಳನ್ನು ಒಳಗೊಂಡ ಆರೋಗ್ಯ ಕಿಟ್‌ಗಳನ್ನು ವಿತರಿಸಿ ಮಾತನಾಡಿ ತಾಯಿ ಮತ್ತು ಶಿಶು ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಈ ಕಿಟ್‌ಗಳ ವಿತರಣೆಯಿಂದ ಬಾಣಂತಿಯರಲ್ಲಿ ಸ್ವಚ್ಚತೆ, ಪೋಷಣೆಯ ಅರಿವು ಹೆಚ್ಚುವ ಸಾಧ್ಯತೆ ಇದ್ದು, ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ತಾಯಂದಿರಿಗೆ ಅಗತ್ಯ ನೆರವು ದೊರಕುವ ಮೂಲಕ ಅವರ ಆರೋಗ್ಯದಲ್ಲಿ ಉತ್ತಮ ಬದಲಾವಣೆ ನಿರೀಕ್ಷಿಸಲಾಗಿದೆ. ಇದರಿಂದ ನವಜಾತ ಶಿಶುಗಳ ಆರೈಕೆಯ ಮಟ್ಟ ಸುಧಾರಿಸದೇ ತಾಯಿ-ಮಗು ಮರಣ ಪ್ರಮಾಣ ಕಡಿಮೆ ಮಾಡುವ ದಿಶೆಯಲ್ಲಿ ಸಹಕಾರಿಯಾಗಲಿದೆ ಹಾಗೂ ಸಮುದಾಯದಲ್ಲಿ ಆರೋಗ್ಯ ಸೇವೆಗಳ ಮೇಲಿನ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿದೆ ಎಂದರು
ಕಾರ್ಯಕ್ರಮದ ಅಂತ್ಯದಲ್ಲಿ ಫಲಾನುಭವಿಗಳು ಸಂಸ್ಥೆಯ ಸೇವೆಯನ್ನು ಮೆಚ್ಚಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿ ವರ್ಗದವರು. ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ