Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸರ್ಕಾರದಿಂದ ಮೋಸ : ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

ಬೆಳಗಾವಿ : ನಗರದ ರಾಣಿ ಚೆನ್ನಮ್ಮ ಸರ್ಕಲ್ ದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು*

ಪ್ರತಿಭಟನೆ ಉದ್ದೇಶಿಸಿ ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಅಹಿಂದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿರುವ ತಾವುಗಳು ಹಿಂದುಳಿದ ವರ್ಗಗಳ ಜನರ ಆರ್ಥಿಕ,

ಔದ್ಯೋಗಿಕ, ಕೃಷಿ, ಮತ್ತು ಶಿಕ್ಷಣಕ್ಕಾಗಿ ನಿಗಮಗಳಿಗೆ ಹಣ ಬಿಡುಗಡೆ ಮಾಡದೇ ಇರುವುದು ಅತ್ಯಂತ

ನೋವಿನ ಸಂಗತಿಯಾಗಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ

ಅಭಿವೃದ್ಧಿಗಾಗಿ 1000 ಕೋಟಿಗೂ ಹೆಚ್ಚು ಅನುದಾನವನ್ನು ದಿ.ದೇವರಾಜ ಅರಸು, ಒಕ್ಕಲಿಗ, ಮರಾಠ,

ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಆಲೆಮಾರಿ

ಅರೆ ಅಲೆಮಾರಿ, ಮಡಿವಾಳ ಮಾಚಿ ದೇವ, ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ

ಬಿಡುಗಡೆ ಮಾಡಿತ್ತು. ಆದರೆ ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1600 ಕೋಟಿ

ಬಜೆಟ್‌ನಲ್ಲಿ ಘೋಷಣೆ ಮಾಡಿ ಕೇವಲ 57.04 ಕೋಟಿ ರೂಪಾಯಿ ಮಾತ್ರ ವೆಚ್ಚ ಮಾಡಿ ಮೋಸ

ಮಾಡಿರುವುದು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ 6065

ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡ ಬಿಡುಗಡೆ ಮಾಡದೇ ಇರುವುದು

ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು. ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಮಾತನಾಡಿ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲೆಮರೆ ಕಾಯಿಯಂತೆ ಇರುವ ಅತ್ಯಂತ ಹಿಂದುಳಿದ

ಸಮುದಾಯಗಳಾದ ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಹಡಪದ, ಈಡಿಗ, ಮತ್ತು ಮಾಳಿ

ಸಮುದಾಯಗಳು ಕೂಡಾ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ಬರಬೇಕೆಂದು ಪ್ರತ್ಯೇಕ

ಅಭಿವೃದ್ಧಿ ನಿಗಮಗಳನ್ನು ಬಿಜೆಪಿ ಸರಕಾರ ಸ್ಥಾಪಿಸಿತ್ತು. ಆದರೆ ತಮ್ಮ ಸರ್ಕಾರ ಇಂತಹ ಸಣ್ಣ ಸಣ್ಣ

ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಒಂದು ಪೈಸೆ ಹಣ ಬಿಡುಗಡೆ ಮಾಡದೆ ಅನ್ಯಾಯ

ಮಾಡಲಾಗಿರುತ್ತದೆ ಹೀಗಾಗಿ ಕೂಡಲೇ ಸದರಿ ನಿಗಮಗಳಿಗೆ ಹಣವನ್ನು ಮಂಜೂರಾತಿ ಮಾಡಲು ಸನ್ಮಾನ್ಯ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ತಾವು ಈ ಹಿಂದೆ

ಬಜೆಟಿನಲ್ಲಿ ಘೋಷಣೆ ಮಾಡಿರುವಂತೆ 1600 ಕೋಟಿ ಕೂಡಲೇ ಬಿಡುಗಡೆ ಮಾಡಿ ಅವರ ಆರ್ಥಿಕ

ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಬೇಕೆಂದು ಹೇಳಿದರು ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಮಾದಮ್ಮನವರ, ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಸಂತೋಷ ಹಡಪದ,ರೇಖಾ ಚಿನ್ನಾಕಟ್ಟಿ, ಸಚಿನ್ ಕಡಿ, ಯಲ್ಲೇಶ್ ಕೊಲಕಾರ, ಸಂತೋಷ ದೇಶನೂರ, ಸುಭಾಷ್ ಸಣ್ಣವೀರಪ್ಪನವರ, ಯುವರಾಜ ಜಾಧವ, ಧನಂಜಯ ಜಾಧವ, ಮನೋಜ್ ಪಾಟೀಲ್, ಪ್ರಶಾಂತ್ ಅಮ್ಮಿನಭಾವಿ, ವೀರಭದ್ರ ಪೂಜಾರಿ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ