LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ತಪ್ಪಿಲ್ಲ: ಡಿಕೆ ಶಿವಕುಮಾರ್‌

ಮೈಸೂರು, ಫೆಬ್ರವರಿ 12: ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆ (Udayagiri riots) ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಹೇಳಿದರು.

ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆಎಸ್​ ರಾಜಣ್ಣ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ‌. 8-10 ದಿನದಲ್ಲಿ ಮುಖ್ಯಮಂತ್ರಿಗಳೇ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.

ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದರು.

ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ಮಾತ್ರವಲ್ಲ, ಬಿಜೆಪಿ ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದೆ. ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ವ್ಯಾಪ್ತಿಗೆ ಬರುತ್ತೆ. ದರ ಏರಿಕೆಗೆ ನೇಮಿಸಿರುವ ಮುಖ್ಯಸ್ಥರು ಅದನ್ನು ನಿರ್ಧಾರ ಮಾಡ್ತಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ದೆಹಲಿ ಪ್ರವಾಸ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಅವರು ದೊಡ್ಡವರು, ನಾನು ದೊಡ್ಡವರ ಬಗ್ಗೆ ಮಾತನಾಡಲ್ಲ. ರಾಜಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ಕೆ.ಎನ್.ರಾಜಣ್ಣ ಬಗ್ಗೆ ನಾನೇನು ಪ್ರತಿಕ್ರಿಯೆ ಕೊಡಲಿ ಹೇಳಿ? ಎಂದು ಪ್ರಶ್ನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್