ಟಿವಿ ಮತ್ತು ಯೂಟೂಬ್ ಚಾನೆಲ್ ಗಳು ಹೆಚ್ಚಾಗಿದ್ದು, ಪತ್ರಿಕೆಗಳ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರಾಮಾಣಿಕವಾಗಿರುವ ಮಾಧ್ಯಮಗಳಿಗೆ ಸಮಾಜ ಗೌರವ ನೀಡುತ್ತದೆ. ಹೀಗಾಗಿ ನೀವು ಬಹಳ ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗುತ್ತದೆ ಎಂದರು.
ತುಂಗಾಭದ್ರ ಅಣೆಕಟ್ಟೆ ಕ್ರಸ್ಟ್ ಗೇಟ್ ಮುರಿದಾಗ ವಿರೋಧ ಪಕ್ಷಗಳ ನಾಯಕರು ನಮ್ಮ ವಿರುದ್ಧ ಮುಗಿಬಿದ್ದರು. ನನ್ನಿಂದಲೇ ಗೇಟ್ ಮುರಿದಿರುವಂತೆ ಮಾತನಾಡಿದರು. ನಾನು ಆಗ ಅವರಿಗೆ ಉತ್ತರ ನೀಡಲಿಲ್ಲ. ಐದು ದಿನಗಳಲ್ಲೇ ಗೇಟ್ ದುರಸ್ತಿ ಮಾಡಿಸಿದೆವು. ಆಗ ನಾನು ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ ಎಂದು ಉತ್ತರ ಕೊಟ್ಟಿದ್ದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಆಣೆಕಟ್ಟು ತುಂಬಲಿದೆ ಎಂದರು.