ನೇಸರಗಿ . ರಾಜ್ಯ ಬಿಜೆಪಿ ಬೆಳೆಸಿದ ಅಗ್ರಗಣ್ಯ ನಾಯಕ,ಹುಟ್ಟು ಹೋರಾಟಗಾರ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣಿಭೂತ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜಕೀಯ ಜೀವನಕ್ಕೆ ಬಂದು 50 ವರ್ಷವಾದ ಪ್ರಯುಕ್ತ ಅವರನ್ನು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಬೈಲಹೊಂಗಲ ಉದ್ಯಮಿ ವಿಜಯ ಮೆಟಗುಡ, ಬೈಲಹೊಂಗಲ ತಾಲೂಕಾ ಬಿಜೆಪಿ ಮಂಡಳ ಅಧ್ಯಕ್ಷ ಸುಭಾಷ ತುರಮರಿ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾದ ಸಂತೋಷ ಹಡಪದ, ಬೆಳಗಾವಿ ಜಿಲ್ಲಾ ಮಾಧ್ಯಮ ವಕ್ತಾರ ಸಚಿನ ಕಡಿ, ಪ್ರದೀಪ ದೊಡ್ಡಗೌಡರ ಹಾಗೂ ಬಿಜೆಪಿ ಮುಖಂಡರು, ಪಧಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಸೇರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸತ್ಕರಿಸಿ, ಸನ್ಮಾನಿಸಿದರು.