ಬೀಳಗಿ : ಬಣಜಿಗ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ಇವರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಹೊಳಬಸಪ್ಪ ಬಾಳೆಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಬಾಗಲಕೋಟೆಯ ವಿದ್ಯಾಗಿರಿ ಸಾಯಿ ಮಂದಿರದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲೆಯ ಎಲ್ಲ ತಾಲೂಕಿನ ಪದಾಧಿಕಾರಿಗಳು ಹಾಗೂ ವಿಶ್ವಸ್ಥ ಮಂಡಳಿ ಸದಸ್ಯರು, ಮಹಾ ಪೋಷಕರು, ಪೋಷಕರು ಮತ್ತು ಹಿರಿಯರೆಲ್ಲರೂ ಸೇರಿಕೊಂಡು ಅವಿರೋಧವಾಗಿ ನೂತನ ಅಧ್ಯಕ್ಷರನ್ನಾಗಿ ಹೊಳಬಸಪ್ಪ ಗುರುಸಿದ್ದಪ್ಪ ಬಾಳಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ,
ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ ರೂಡಗಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಬಿದರಿ, ಕಾರ್ಯದರ್ಶಿಗಳಾದ ಸಿದ್ದರಾಮ ಶಿರೋಳ,ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಭು ಇದ್ದಲಗಿ ಹಾಗೂ ನಿಕಟಪೂರ್ವ ಜಿಲ್ಲೆಯ ಗೌರವಾಧ್ಯಕ್ಷರಾದ ತಾತಾಸಾಹೇಬ ಬಾಂಗಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಮುತ್ತು ಜೋಳದ ರವಿ ಕುಮಟಗಿ, ರಾಜು ತಪಶೆಟ್ಟಿ ಬಸವರಾಜ ಜಮಖಂಡಿ, ಶಿವಾನಂದ ಪಟ್ಟಣಶೆಟ್ಟಿ, ಸುಭಾಷ್ ಸೌದಿ ಹಾಗೂ ಜಿಲ್ಲೆಯ ಮುಖಂಡರು ಪಾಲ್ಗೊಂಡಿದ್ದರು.
