Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ: ಭೂಮರಡ್ಡಿ



ಕೊಪ್ಪಳ: ಜಾಗತಿಕ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ತಪ್ಪಾಗಿ ಅರ್ಥೈಸುತ್ತಿರುವುದು ದೇಶದ ಪ್ರಗತಿಗೆ ಪೂರಕವಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಜಗತ್ತಿನ ಪ್ರತಿಯೊಂದು ರಾಷ್ಟ್ರಕ್ಕೂ ಸಂಕಷ್ಟವನ್ನು ತಂದಿಟ್ಟಿದೆ. ಹಾಗೆ ನೋಡಿದರೆ ಬಹುತೇಕ ರಾಷ್ಟ್ರಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಅಂತಹ ಪರಿಸ್ಥಿತಿ ನಮ್ಮ ದೇಶದಲ್ಲಿ ಇಲ್ಲ. ಈ ಸಂಘರ್ಷ ಕೊನೆಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಆದ್ದರಿಂದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸುವ ಸಲುವಾಗಿ  ಮಿತವ್ಯಯದ ಕ್ರಮಗಳ ಅಗತ್ಯತೆಯನ್ನು ಪ್ರಧಾನಿಯವರು ಪ್ರತಿಪಾದಿಸಿದ್ದಾರೆ. ಈ ವಾಸ್ತವವನ್ನು ನಾವು ಸರಿಯಾಗಿ ಗ್ರಹಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

"ಸದೃಢ ಆರ್ಥಿಕತೆಗೆ ವಿದೇಶಿ ವಿನಿಮಯ ಹೆಚ್ಚಿನ ಪ್ರಮಾಣದಲ್ಲಿ ಮೀಸಲಿನಲ್ಲಿರಬೇಕು. ಆಮದು ಪ್ರಮಾಣ ಕಡಿಮೆಗೊಂಡರೆ ಹಾಗೂ ದೇಶದ ಸಂಪತ್ತು ದೇಶದಲ್ಲಿಯೇ ವ್ಯಯಗೊಂಡರೆ ಇದು ಸಾಧ್ಯ. ಇಲ್ಲದಿದ್ದರೆ ರೂಪಾಯಿ ಮೌಲ್ಯ ಕುಸಿತಗೊಂಡು ಆರ್ಥಿಕತೆಗೆ ಧಕ್ಕೆ ಉಂಟಾಗುತ್ತದೆ. ಮೋದಿಯವರು  ವೆಚ್ಚ ಕಡಿಮೆ ಮಾಡಿ ಉಳಿತಾಯಕ್ಕೆ ಮಹತ್ವ ಕೊಡಿ ಎಂದು ಹೇಳಿದ್ದಾರೆಯೆ ಹೊರತು ತ್ಯಾಗ ಮಾಡಿ ಎಂದು ಹೇಳಿಲ್ಲ. ಅವರ ಈ ಸಲಹೆ ಯುದ್ಧ ಕೊನೆಗೊಂಡು ಸಹಜ ಸ್ಥಿತಿ ಮರಳುವ ತನಕ ಮಾತ್ರ ಎಂಬುದನ್ನು ಗಮನಿಸಬೇಕಿದೆ,"  ಎಂದು ಭೂಮರೆಡ್ಡಿ ವಿವರಿಸಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ. ಪ್ರಧಾನಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಐಷಾರಾಮಿ ಬದುಕಿಗೆ ಪ್ರಚೋದಿಸುವ ವಿರೋಧ ಪಕ್ಷಗಳ ಹೇಳಿಕೆ ದೇಶದ ಆರ್ಥಿಕ ಭದ್ರತೆಗೆ ಬಹುದೊಡ್ಡ ಅಪಾಯ. ರಾಜಕೀಯ ವಿಷಯಗಳನ್ನು ಆಚೆಗಿಟ್ಟು ದೇಶದ ಹಿತ ದೃಷ್ಟಿಯಿಂದ ವಿಚಾರಿಸುವ ಸಮಯವಿದು ಎಂದು ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ