Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ: ಭೂಮರಡ್ಡಿ



ಕೊಪ್ಪಳ: ಜಾಗತಿಕ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ತಪ್ಪಾಗಿ ಅರ್ಥೈಸುತ್ತಿರುವುದು ದೇಶದ ಪ್ರಗತಿಗೆ ಪೂರಕವಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಜಗತ್ತಿನ ಪ್ರತಿಯೊಂದು ರಾಷ್ಟ್ರಕ್ಕೂ ಸಂಕಷ್ಟವನ್ನು ತಂದಿಟ್ಟಿದೆ. ಹಾಗೆ ನೋಡಿದರೆ ಬಹುತೇಕ ರಾಷ್ಟ್ರಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಅಂತಹ ಪರಿಸ್ಥಿತಿ ನಮ್ಮ ದೇಶದಲ್ಲಿ ಇಲ್ಲ. ಈ ಸಂಘರ್ಷ ಕೊನೆಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಆದ್ದರಿಂದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸುವ ಸಲುವಾಗಿ  ಮಿತವ್ಯಯದ ಕ್ರಮಗಳ ಅಗತ್ಯತೆಯನ್ನು ಪ್ರಧಾನಿಯವರು ಪ್ರತಿಪಾದಿಸಿದ್ದಾರೆ. ಈ ವಾಸ್ತವವನ್ನು ನಾವು ಸರಿಯಾಗಿ ಗ್ರಹಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

"ಸದೃಢ ಆರ್ಥಿಕತೆಗೆ ವಿದೇಶಿ ವಿನಿಮಯ ಹೆಚ್ಚಿನ ಪ್ರಮಾಣದಲ್ಲಿ ಮೀಸಲಿನಲ್ಲಿರಬೇಕು. ಆಮದು ಪ್ರಮಾಣ ಕಡಿಮೆಗೊಂಡರೆ ಹಾಗೂ ದೇಶದ ಸಂಪತ್ತು ದೇಶದಲ್ಲಿಯೇ ವ್ಯಯಗೊಂಡರೆ ಇದು ಸಾಧ್ಯ. ಇಲ್ಲದಿದ್ದರೆ ರೂಪಾಯಿ ಮೌಲ್ಯ ಕುಸಿತಗೊಂಡು ಆರ್ಥಿಕತೆಗೆ ಧಕ್ಕೆ ಉಂಟಾಗುತ್ತದೆ. ಮೋದಿಯವರು  ವೆಚ್ಚ ಕಡಿಮೆ ಮಾಡಿ ಉಳಿತಾಯಕ್ಕೆ ಮಹತ್ವ ಕೊಡಿ ಎಂದು ಹೇಳಿದ್ದಾರೆಯೆ ಹೊರತು ತ್ಯಾಗ ಮಾಡಿ ಎಂದು ಹೇಳಿಲ್ಲ. ಅವರ ಈ ಸಲಹೆ ಯುದ್ಧ ಕೊನೆಗೊಂಡು ಸಹಜ ಸ್ಥಿತಿ ಮರಳುವ ತನಕ ಮಾತ್ರ ಎಂಬುದನ್ನು ಗಮನಿಸಬೇಕಿದೆ,"  ಎಂದು ಭೂಮರೆಡ್ಡಿ ವಿವರಿಸಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ. ಪ್ರಧಾನಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಐಷಾರಾಮಿ ಬದುಕಿಗೆ ಪ್ರಚೋದಿಸುವ ವಿರೋಧ ಪಕ್ಷಗಳ ಹೇಳಿಕೆ ದೇಶದ ಆರ್ಥಿಕ ಭದ್ರತೆಗೆ ಬಹುದೊಡ್ಡ ಅಪಾಯ. ರಾಜಕೀಯ ವಿಷಯಗಳನ್ನು ಆಚೆಗಿಟ್ಟು ದೇಶದ ಹಿತ ದೃಷ್ಟಿಯಿಂದ ವಿಚಾರಿಸುವ ಸಮಯವಿದು ಎಂದು ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶ ಸುಭಿಕ್ಷೆಯಾಗಿದ್ದರೆ, ನಾವೆಲ್ಲರೂ ನಾವೆಲ್ಲರೂ ಸುರಕ್ಷಿತವಾಗಿರಲು  ಸಾಧ್ಯ - ಮೀನಳ್ಳಿ ತಾಯಣ್ಣ ಗಾಳಿ ಮಳೆಯ ರಭಸಕ್ಕೆ, ಸರ್ಕಾರಿ ಶಾಲೆ ರಕ್ಷಣಾ ಗೋಡೆ ದ್ವಂಸಜಿಗಜೇವಣಿ ಗ್ರಾಮದ ಕೆರೆಗೆ ಅಳವಡಿಸಲಾದ ಪೈಪಲೈನ್ ತೆರವುಗೊಳಿಸುವಂತೆ ಮನವಿ ಸಿದ್ಧಾರ್ಥ ನಗರದ ಜನರ ಸಮಸ್ಯೆ ಆಲಿಸಿ, ಕ್ರಮಕ್ಕೆ ಸೂಚಿಸಿದ ಶಾಸಕ ನಾರಾ ಭರತ್ ರೆಡ್ಡಿಒಂದು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ  ಅರ್ಜಿ ಅಹ್ವಾನಉಚಿತ ಬೇಸಿಗೆ ಶಿಬಿರಕ್ಕೆ ಡಿಸಿ ಸಂಗಪ್ಪ ಚಾಲನೆಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಹುಬ್ಬಳ್ಳಿಯಲ್ಲಿ ಮೇ 16, 17 ರಂದು 12ನೇ 'ಮೇ ಸಾಹಿತ್ಯ ಮೇಳ': ಅಲ್ಲಮಪ್ರಭು ಬೆಟ್ಟದೂರುವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಮೇ 31ರಂದು ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ